<p><strong>ಕಲಬುರ್ಗಿ:</strong> ‘ಸಾಲ ಮರು ಪಾವತಿಸುವಂತೆ ರೈತರಿಗೆ ಕಿರುಕುಳ ನೀಡಿದರೆ ಬ್ಯಾಂಕ್ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಅಫಜಲಪುರ ತಾಲ್ಲೂಕು ಚವಡಾಪುರದಲ್ಲಿ ಮಳೆ ಅಭಾವದಿಂದ ಹಾನಿಗೊಳಗಾಗಿರುವ ತೊಗರಿ ಹೊಲವನ್ನು ಸೋಮವಾರ ವೀಕ್ಷಿಸಿದ ಅವರು ರೈತರಿಗೆ ಅಭಯ ನೀಡಿದರು.</p>.<p>‘ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಮರು ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಯಾವಾಗ ಮನ್ನಾ ಆಗುತ್ತದೆ’ ಎಂದು ರೈತ ಮಡಿವಾಳಪ್ಪ ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಇನ್ನೊಂದು ವಾರದಲ್ಲಿ ಎಲ್ಲವೂ ಸರಿಯಾಗುತ್ತದೆ. ರೈತರಿಗೆ ಕಿರುಕುಳ ನೀಡದಂತೆ ಬ್ಯಾಂಕ್ ಅಧಿಕಾರಿಗಳಿಗೆ ಇನ್ನೊಮ್ಮೆ ಎಚ್ಚರಿಕೆ ನೀಡಲಾಗುವುದು. ವಿಜಯಪುರದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರನ್ನು ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ’ ಎಂದರು.</p>.<p>400 ಸಾಂಸ್ಕೃತಿಕ ಭವನ:‘ರಾಜ್ಯದ 1,500 ತಾಂಡಾಗಳ ಪೈಕಿ ಮೊದಲ ಹಂತದಲ್ಲಿ ₹30 ಕೋಟಿ ವೆಚ್ಚದಲ್ಲಿ 400 ತಾಂಡಾಗಳಲ್ಲಿ ಸೇವಾಲಾಲ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ ಮತ್ತು ಪುನಶ್ಚೇತನ ಕೈಗೊಳ್ಳಲಾಗುವುದು’ ಎಂದು, ಕಲಬುರ್ಗಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು.</p>.<p>‘2019–20ರಲ್ಲಿ 500 ಹಾಗೂ 2020–21ರಲ್ಲಿ 600 ತಾಂಡಾಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಒಟ್ಟು ₹122.50 ಕೋಟಿ ವೆಚ್ಚವಾಗಲಿದೆ’ ಎಂದರು.</p>.<p><strong>ದೇವಸ್ಥಾನಕ್ಕೆ ಭೇಟಿ</strong></p>.<p>ಅಫಜಲಪುರ ತಾಲ್ಲೂಕು ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ದತ್ತಾತ್ರೇಯನ ದರ್ಶನ ಪಡೆದು, ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಸಾಲ ಮರು ಪಾವತಿಸುವಂತೆ ರೈತರಿಗೆ ಕಿರುಕುಳ ನೀಡಿದರೆ ಬ್ಯಾಂಕ್ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಅಫಜಲಪುರ ತಾಲ್ಲೂಕು ಚವಡಾಪುರದಲ್ಲಿ ಮಳೆ ಅಭಾವದಿಂದ ಹಾನಿಗೊಳಗಾಗಿರುವ ತೊಗರಿ ಹೊಲವನ್ನು ಸೋಮವಾರ ವೀಕ್ಷಿಸಿದ ಅವರು ರೈತರಿಗೆ ಅಭಯ ನೀಡಿದರು.</p>.<p>‘ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಮರು ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಯಾವಾಗ ಮನ್ನಾ ಆಗುತ್ತದೆ’ ಎಂದು ರೈತ ಮಡಿವಾಳಪ್ಪ ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಇನ್ನೊಂದು ವಾರದಲ್ಲಿ ಎಲ್ಲವೂ ಸರಿಯಾಗುತ್ತದೆ. ರೈತರಿಗೆ ಕಿರುಕುಳ ನೀಡದಂತೆ ಬ್ಯಾಂಕ್ ಅಧಿಕಾರಿಗಳಿಗೆ ಇನ್ನೊಮ್ಮೆ ಎಚ್ಚರಿಕೆ ನೀಡಲಾಗುವುದು. ವಿಜಯಪುರದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರನ್ನು ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ’ ಎಂದರು.</p>.<p>400 ಸಾಂಸ್ಕೃತಿಕ ಭವನ:‘ರಾಜ್ಯದ 1,500 ತಾಂಡಾಗಳ ಪೈಕಿ ಮೊದಲ ಹಂತದಲ್ಲಿ ₹30 ಕೋಟಿ ವೆಚ್ಚದಲ್ಲಿ 400 ತಾಂಡಾಗಳಲ್ಲಿ ಸೇವಾಲಾಲ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ ಮತ್ತು ಪುನಶ್ಚೇತನ ಕೈಗೊಳ್ಳಲಾಗುವುದು’ ಎಂದು, ಕಲಬುರ್ಗಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು.</p>.<p>‘2019–20ರಲ್ಲಿ 500 ಹಾಗೂ 2020–21ರಲ್ಲಿ 600 ತಾಂಡಾಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಒಟ್ಟು ₹122.50 ಕೋಟಿ ವೆಚ್ಚವಾಗಲಿದೆ’ ಎಂದರು.</p>.<p><strong>ದೇವಸ್ಥಾನಕ್ಕೆ ಭೇಟಿ</strong></p>.<p>ಅಫಜಲಪುರ ತಾಲ್ಲೂಕು ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ದತ್ತಾತ್ರೇಯನ ದರ್ಶನ ಪಡೆದು, ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>