<p><strong>ಬೆಂಗಳೂರು</strong>: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ‘ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ’ (ಸಿಎಂಐಡಿಪಿ) ಅಡಿ ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ’ ಎಂದು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಆರ್ಥಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>‘ಸಿಎಂಐಡಿಪಿ ಯೋಜನೆಯಡಿ ಆಡಳಿತ ಪಕ್ಷದ ಶಾಸಕರಿಗೆ ತಲಾ ₹50 ಕೋಟಿ ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಹಂಚಿಕೆ ಮಾಡಿ ತಾರತಮ್ಯ ಎಸಗಲಾಗಿದೆ’ ಎಂದು ಆರೋಪಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಶಿವಯ್ಯ ಗುಡಗುಂಟಿ ಸಲ್ಲಿಸಿರುವ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು 2026ರ ಜನವರಿ 31ಕ್ಕೆ ಮುಂದೂಡಿತು.</p>.<p><strong>ಆಕ್ಷೇಪವೇನು</strong>?: ‘ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಾರತಮ್ಯ ಮಾಡುತ್ತಿರುವ ಸರ್ಕಾರದ ಈ ಧೋರಣೆ ಸಂವಿಧಾನದ 14ನೇ ವಿಧಿ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳು ಹಾಗೂ 38 ಮತ್ತು 39ನೇ ವಿಧಿ ಅಡಿಯಲ್ಲಿನ ರಾಜ್ಯ ನೀತಿ ನಿರ್ದೇಶಕ ತತ್ವಗಳ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ‘ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ’ (ಸಿಎಂಐಡಿಪಿ) ಅಡಿ ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ’ ಎಂದು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಆರ್ಥಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>‘ಸಿಎಂಐಡಿಪಿ ಯೋಜನೆಯಡಿ ಆಡಳಿತ ಪಕ್ಷದ ಶಾಸಕರಿಗೆ ತಲಾ ₹50 ಕೋಟಿ ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಹಂಚಿಕೆ ಮಾಡಿ ತಾರತಮ್ಯ ಎಸಗಲಾಗಿದೆ’ ಎಂದು ಆರೋಪಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಶಿವಯ್ಯ ಗುಡಗುಂಟಿ ಸಲ್ಲಿಸಿರುವ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು 2026ರ ಜನವರಿ 31ಕ್ಕೆ ಮುಂದೂಡಿತು.</p>.<p><strong>ಆಕ್ಷೇಪವೇನು</strong>?: ‘ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಾರತಮ್ಯ ಮಾಡುತ್ತಿರುವ ಸರ್ಕಾರದ ಈ ಧೋರಣೆ ಸಂವಿಧಾನದ 14ನೇ ವಿಧಿ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳು ಹಾಗೂ 38 ಮತ್ತು 39ನೇ ವಿಧಿ ಅಡಿಯಲ್ಲಿನ ರಾಜ್ಯ ನೀತಿ ನಿರ್ದೇಶಕ ತತ್ವಗಳ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>