<p><strong>ಬೆಂಗಳೂರು</strong>: 'ಹೊಸ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದ್ದು, ಭವಿಷ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಜಾಗತಿಕ ಗುಣಮಟ್ಟ ಸಾಧಿಸಲಿವೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಆವಿಷ್ಕಾರ್-2020’ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಉನ್ನತ ಶಿಕ್ಷಣದ ದಿಕ್ಕನ್ನು ಶಿಕ್ಷಣ ನೀತಿ ಬದಲಿಸಲಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕಾಲೇಜುಗಳ ಪುನಶ್ಚೇತನಕ್ಕೂ ಇದರಿಂದ ಅನುಕೂಲವಾಗಲಿದೆ. ಸಂಶೋಧನೆ ಮತ್ತು ಗುಣಮಟ್ಟದ ಬೋಧನೆಯ ದಿಕ್ಕಿನಲ್ಲಿ ಮುಂದಿನ ದಿನಗಳಲ್ಲಿ ಗಮನಾರ್ಹ ಬದಲಾವಣೆಗಳು ಗೋಚರವಾಗಲಿವೆ’ ಎಂದರು.</p>.<p><strong>134 ಪ್ರಾಜೆಕ್ಟ್:</strong> ಮಹಿಳಾ ಸುರಕ್ಷತೆ, ಸ್ವಚ್ಛ ಭಾರತ, ಸ್ವಸ್ಥ್ಯ ಭಾರತ್, ಡಿಜಿಟಲ್ ಇಂಡಿಯಾ, ಗ್ರೀನ್ ಎನರ್ಜಿ, ಪರಿಸರ ರಕ್ಷಣೆ, ಕೃಷಿ ಸಲಕರಣೆಗಳು ಸೇರಿದಂತೆ ವಿವಿಧ ವಿಷಯಗಳ ಒಟ್ಟು 134 ಪ್ರಾಜೆಕ್ಟ್ಗಳನ್ನು ವಿದ್ಯಾರ್ಥಿಗಳು ‘ಆವಿಷ್ಕಾರ್–2020’ದಲ್ಲಿ ಮಂಡಿಸಿದ್ದು, ವಿಜೇತ ಪ್ರಾಜೆಕ್ಟ್ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವಾಗಿ ಕ್ರಮವಾಗಿ ₹ 25 ಸಾವಿರ, ₹ 20 ಸಾವಿರ, ₹ 15 ಸಾವಿರ ನಗದು ನೀಡಲಾಯಿತು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಹೊಸ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದ್ದು, ಭವಿಷ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಜಾಗತಿಕ ಗುಣಮಟ್ಟ ಸಾಧಿಸಲಿವೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಆವಿಷ್ಕಾರ್-2020’ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಉನ್ನತ ಶಿಕ್ಷಣದ ದಿಕ್ಕನ್ನು ಶಿಕ್ಷಣ ನೀತಿ ಬದಲಿಸಲಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕಾಲೇಜುಗಳ ಪುನಶ್ಚೇತನಕ್ಕೂ ಇದರಿಂದ ಅನುಕೂಲವಾಗಲಿದೆ. ಸಂಶೋಧನೆ ಮತ್ತು ಗುಣಮಟ್ಟದ ಬೋಧನೆಯ ದಿಕ್ಕಿನಲ್ಲಿ ಮುಂದಿನ ದಿನಗಳಲ್ಲಿ ಗಮನಾರ್ಹ ಬದಲಾವಣೆಗಳು ಗೋಚರವಾಗಲಿವೆ’ ಎಂದರು.</p>.<p><strong>134 ಪ್ರಾಜೆಕ್ಟ್:</strong> ಮಹಿಳಾ ಸುರಕ್ಷತೆ, ಸ್ವಚ್ಛ ಭಾರತ, ಸ್ವಸ್ಥ್ಯ ಭಾರತ್, ಡಿಜಿಟಲ್ ಇಂಡಿಯಾ, ಗ್ರೀನ್ ಎನರ್ಜಿ, ಪರಿಸರ ರಕ್ಷಣೆ, ಕೃಷಿ ಸಲಕರಣೆಗಳು ಸೇರಿದಂತೆ ವಿವಿಧ ವಿಷಯಗಳ ಒಟ್ಟು 134 ಪ್ರಾಜೆಕ್ಟ್ಗಳನ್ನು ವಿದ್ಯಾರ್ಥಿಗಳು ‘ಆವಿಷ್ಕಾರ್–2020’ದಲ್ಲಿ ಮಂಡಿಸಿದ್ದು, ವಿಜೇತ ಪ್ರಾಜೆಕ್ಟ್ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವಾಗಿ ಕ್ರಮವಾಗಿ ₹ 25 ಸಾವಿರ, ₹ 20 ಸಾವಿರ, ₹ 15 ಸಾವಿರ ನಗದು ನೀಡಲಾಯಿತು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>