ಅಲ್ಲದೇ, ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ ತಾವೇ ಪ್ರತ್ಯೇಕ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದು ವ್ಯಾಪಕವಾಗಿ ಕಂಡು ಬಂದಿದೆ. ಬೇರೆ ಜಿಲ್ಲೆಗಳ 3,500 ರೈತರನ್ನು ಹಾಸನದಲ್ಲಿ ನೋಂದಣಿ ಮಾಡಲಾಗಿದೆ. ತೆಂಗು ಅತಿ ಹೆಚ್ಚು ಬೆಳೆಯುವ ತುಮಕೂರು ಜಿಲ್ಲೆಯಲ್ಲಿ ನೋಂದಣಿ ಕಡಿಮೆಯಾಗಿದೆ. ಆದ್ದರಿಂದ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಿ, 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.