ಬೆಳಗಾವಿ ಜಿಲ್ಲೆಯ ನಿಪ್ಪಾಣಿಯವರಾದ ನ್ಯಾಯಮೂರ್ತಿ ವರಾಳೆ 1985ರ ಆಗಸ್ಟ್ನಲ್ಲಿ ವಕೀಲಿಕೆ ಸನ್ನದು ಪಡೆದು, ಎಸ್. ಎನ್. ಲೋಯಾ ಅವರ ಕಚೇರಿಯಲ್ಲಿ ವೃತ್ತಿ ಆರಂಭಿಸಿದ್ದರು. 1992ರವರೆಗೆ ಔರಂಗಾಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ 2008ರ ಜುಲೈ 18ರಂದು ನೇಮಕಗೊಂಡಿದ್ದರು. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ 2022ರ ಅಕ್ಟೋಬರ್ 12ರಂದು ನೇಮಿಸಲಾಗಿತ್ತು.