‘ವಾಣಿಜ್ಯ ಸಂಕೀರ್ಣಗಳನ್ನು ಒಡೆಯಲು ಹಾಗೂ ಅವು ಖಾಸಗಿಯವರ ಪಾಲಾಗಲು ಬಿಡುವುದಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಕೂಡ ಇದೇ ಯೋಜನೆಗೆ ಕೈಹಾಕಿತ್ತು. ಭಾರೀ ವಿರೋಧ ವ್ಯಕ್ತವಾದ ಕಾರಣ ಯೋಜನೆಯನ್ನು ಜಾರಿಗೆ ತಂದಿರಲಿಲ್ಲ. ಆಗ ವಿರೋಧಿಸಿದ್ದ ಬಿಜೆಪಿಯವರೇ ಈಗ ಮರುನಿರ್ಮಾಣದ ಹೆಸರಿನಲ್ಲಿ ದುಡ್ಡು ಮಾಡಲು ಹೊರಟಿದ್ದಾರೆ. ವಿರೋಧ ಪಕ್ಷದಲ್ಲಿದ್ದಾಗ ಒಂದು ನಿಲುವು, ಅಧಿಕಾರದಲ್ಲಿದ್ದಾಗ ಮತ್ತೊಂದು ನಿಲುವು ತೆಗೆದುಕೊಳ್ಳುವ ಬಿಜೆಪಿಗೆ ನಾಚಿಕೆಯಾಗಬೇಕು’ ಎಂದು ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.