ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸಲು ವಾರದಲ್ಲಿ ಎರಡು ದಿನ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಂಡಿದೆ. ಮಕ್ಕಳ ಆಯ್ಕೆಯಂತೆ ಮೊಟ್ಟೆ, ಶೇಂಗಾಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಕೆಲ ಶಾಲೆಗಳಲ್ಲಿ ಮಕ್ಕಳು ಮೊಟ್ಟೆಗೆ ಬೇಡಿಕೆ ಇಟ್ಟರೂ, ಕೊಡದೆ ಚಿಕ್ಕಿ, ಬಾಳೆಹಣ್ಣು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಮಕ್ಕಳ ಆಯ್ಕೆಗೆ ವಿರುದ್ಧವಾಗಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಮೇಲ್ವಿಚಾರಣೆ ನಡೆಸಬೇಕು ಎಂದಿದ್ದಾರೆ.