<p><strong>ಬೆಂಗಳೂರು</strong>: ಶಿಡ್ಲಘಟ್ಟದ ಪೌರ ಆಯುಕ್ತೆ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ತಕ್ಷಣವೇ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಒತ್ತಾಯಿಸಿದ್ದಾರೆ.</p>.<p>ಬುಧವಾರ ಬೆಳಿಗ್ಗೆಯೇ ಮುಖ್ಯ ಕಾರ್ಯದರ್ಶಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು, ರಾಜಕಾರಣಿಗಳು ಸರ್ಕಾರಿ ಅಧಿಕಾರಿಯನ್ನು ನಿಂದಿಸಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಸಚಿವರ ಕಚೇರಿಯು ತಿಳಿಸಿದೆ.</p>.<p>‘ಮಹಿಳಾ ಅಧಿಕಾರಿ ಒಬ್ಬರಿಗೆ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿಯೊಬ್ಬರು ಕರೆ ಮಾಡಿ ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವುದು, ಬೆದರಿಕೆ ಹಾಕಿರುವುದು ಖಂಡನೀಯ. ಕಾನೂನುಬದ್ಧವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲವೇ ಎಂದು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು’ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿಡ್ಲಘಟ್ಟದ ಪೌರ ಆಯುಕ್ತೆ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ತಕ್ಷಣವೇ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಒತ್ತಾಯಿಸಿದ್ದಾರೆ.</p>.<p>ಬುಧವಾರ ಬೆಳಿಗ್ಗೆಯೇ ಮುಖ್ಯ ಕಾರ್ಯದರ್ಶಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು, ರಾಜಕಾರಣಿಗಳು ಸರ್ಕಾರಿ ಅಧಿಕಾರಿಯನ್ನು ನಿಂದಿಸಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಸಚಿವರ ಕಚೇರಿಯು ತಿಳಿಸಿದೆ.</p>.<p>‘ಮಹಿಳಾ ಅಧಿಕಾರಿ ಒಬ್ಬರಿಗೆ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿಯೊಬ್ಬರು ಕರೆ ಮಾಡಿ ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವುದು, ಬೆದರಿಕೆ ಹಾಕಿರುವುದು ಖಂಡನೀಯ. ಕಾನೂನುಬದ್ಧವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲವೇ ಎಂದು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು’ ಎಂದು ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>