ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
Published 24 ಜೂನ್ 2023, 19:55 IST
Last Updated 24 ಜೂನ್ 2023, 19:55 IST
ಅಕ್ಷರ ಗಾತ್ರ

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ, ಅಸಮಾನತೆ ನಿವಾರಣೆಗೆ ಸರ್ಕಾರ ಬದ್ಧವಾಗಿದೆ. ಸಾಹಿತಿಗಳು, ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಆತಂಕ ಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಶನಿವಾರ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ನ್ಯೂನತೆಗಳನ್ನು ಹೋಗಲಾಡಿಸಲು ಶ್ರಮಿಸಬೇಕು. ಜಾತಿಯ ಕಾರಣಕ್ಕಾಗಿಯೇ ಹಲವರು ಅಕ್ಷರ  ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ ಸೃಷ್ಟಿಯಾಗಿದೆ. ಈ ಅಸಮಾನತೆ ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದ ನೆಲೆಸುತ್ತದೆ. ಸರ್ವರ ಅಭಿವೃದ್ಧಿಯಾಗುತ್ತದೆ ಎಂದರು.

ಕಲಬುರಗಿಯ ಡಾ.ಪಿ.ಎಸ್‌.ಶಂಕರ್ ಅವರಿಗೆ ‘ಸಾಹಿತ್ಯ ರತ್ನ’, ಸಕಲೇಶಪುರದ ಕೌಶಿಕ್‌ ಕೂಡುರಸ್ತೆ ಅವರಿಗೆ ‘ಯುವ ಸಾಹಿತ್ಯ ರತ್ನ’, ಮೈಸೂರಿನ ಪುಸ್ತಕ ಪ್ರಕಾಶನದ ಬಿ.ಎನ್‌.ಶ್ರೀರಾಮ ಅವರಿಗೆ ‘ಪುಸ್ತಕ ರತ್ನ’ ಹಾಗೂ ಮೈಸೂರು ಪ್ರಿಂಟಿಂಗ್‌ ಆ್ಯಂಡ್‌ ಪಬ್ಲಿಷಿಂಗ್‌ ಹೌಸ್‌ನ ಜಿ.ಎಚ್‌.ಕೃಷ್ಣಮೂರ್ತಿ ಅವರಿಗೆ ‘ಮುದ್ರಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಸಂಶೋಧಕ ಹಂಪ. ನಾಗರಾಜಯ್ಯ, ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ, ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯದರ್ಶಿ ಆರ್.ದೊಡ್ಡೇಗೌಡ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT