<p><strong>ಬೆಂಗಳೂರು</strong>: ‘ಖಾಸಗಿ ಟಿ.ವಿ ಚಾನೆಲ್ಗಳಲ್ಲಿ ಅಸಭ್ಯ ಹಾಗೂ ಕೀಳು ಅಭಿರುಚಿಯ ಕಾರ್ಯಕ್ರಮ ಪ್ರಸಾರ ನಿಯಂತ್ರಿಸುವ ದಿಸೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ’ ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮೇಲ್ವಿಚರಣಾ ಸಮಿತಿ ರಚನೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಖಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರಿ ವಕೀಲ ವಿ.ಶ್ರೀನಿಧಿ, ಜಿಲ್ಲಾ ಸಮಿತಿ ರಚನೆಯಾದ ದಿನಾಂಕ, ನಡೆಸಿರುವ ಸಭೆ, ದಾಖಲಾದ ದೂರುಗಳ ಬಗ್ಗೆ ಮಾಹಿತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p>ಈ ಕುರಿತ ಮೆಮೊ ದಾಖಲಿಸಿಕೊಂಡ ನ್ಯಾಯಪೀಠ, ‘ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಮಾರ್ಚ್ 31ರ ವೇಳೆಗೆ ಎಷ್ಟು ಸಭೆ ನಡೆಸಿವೆ, ಎಷ್ಟು ದೂರು ದಾಖಲಾಗಿವೆ, ಈ ಸಂಬಂಧ ಸಮಿತಿ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ಗೆ ಮುಂದೂಡಿದೆ.</p>.<p>‘ಖಾಸಗಿ ಟಿ.ವಿ. ಚಾನೆಲ್ ಕಾರ್ಯಕ್ರಮಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ 080-22028013ಗೆ ಅಥವಾ ವಾಟ್ಸ್ ಆ್ಯಪ್ ಮೂಲಕ (94808–41212) ದೂರು ನೀಡಬಹುದು. ದೂರು ನಿರ್ವಹಣೆಗೆ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆಯಲಾಗಿದೆ’ ಎಂದು 2019ರ ಡಿಸೆಂಬರ್ 16ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಖಾಸಗಿ ಟಿ.ವಿ ಚಾನೆಲ್ಗಳಲ್ಲಿ ಅಸಭ್ಯ ಹಾಗೂ ಕೀಳು ಅಭಿರುಚಿಯ ಕಾರ್ಯಕ್ರಮ ಪ್ರಸಾರ ನಿಯಂತ್ರಿಸುವ ದಿಸೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ’ ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮೇಲ್ವಿಚರಣಾ ಸಮಿತಿ ರಚನೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಖಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರಿ ವಕೀಲ ವಿ.ಶ್ರೀನಿಧಿ, ಜಿಲ್ಲಾ ಸಮಿತಿ ರಚನೆಯಾದ ದಿನಾಂಕ, ನಡೆಸಿರುವ ಸಭೆ, ದಾಖಲಾದ ದೂರುಗಳ ಬಗ್ಗೆ ಮಾಹಿತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p>ಈ ಕುರಿತ ಮೆಮೊ ದಾಖಲಿಸಿಕೊಂಡ ನ್ಯಾಯಪೀಠ, ‘ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಮಾರ್ಚ್ 31ರ ವೇಳೆಗೆ ಎಷ್ಟು ಸಭೆ ನಡೆಸಿವೆ, ಎಷ್ಟು ದೂರು ದಾಖಲಾಗಿವೆ, ಈ ಸಂಬಂಧ ಸಮಿತಿ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ಗೆ ಮುಂದೂಡಿದೆ.</p>.<p>‘ಖಾಸಗಿ ಟಿ.ವಿ. ಚಾನೆಲ್ ಕಾರ್ಯಕ್ರಮಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ 080-22028013ಗೆ ಅಥವಾ ವಾಟ್ಸ್ ಆ್ಯಪ್ ಮೂಲಕ (94808–41212) ದೂರು ನೀಡಬಹುದು. ದೂರು ನಿರ್ವಹಣೆಗೆ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆಯಲಾಗಿದೆ’ ಎಂದು 2019ರ ಡಿಸೆಂಬರ್ 16ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>