<p><strong>ಮಂಗಳೂರು</strong>: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8ರಿಂದ 10ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.</p><p>ಶುಕ್ರವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಂದೆರಡು ಸ್ಥಳಗಳನ್ನು ಗುರುತಿಸಲಾಗಿದ್ದು, ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡಲಾಗುವುದು. ಸೆಪ್ಟೆಂಬರ್ 11ರಂದು, ಸಮ್ಮೇಳನದಲ್ಲಿ ಭಾಗವಹಿಸುವ ಸ್ಪೀಕರ್ ಗಳಿಗೆ ರಾಜ್ಯ ಪ್ರವಾಸಕ್ಕೆ ಕರೆದೊಯ್ಯಲು ಯೋಚಿಸಲಾಗಿದೆ. ಮೈಸೂರು, ಮಂಗಳೂರು ಹಾಗೂ ಬೇಲೂರು- ಹಳೆಬೀಡು ಈ ಮೂರು ಪ್ರವಾಸಿ ತಾಣಗಳಲ್ಲಿ ಯಾವುದಾದರೂ ಒಂದು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದರು.</p><p> ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಿದೆ. ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ ನೇತೃತದಲ್ಲಿ ಸಮ್ಮೇಳನ ನಡೆಯಲಿದೆ. ದೇಶದ ಎಲ್ಲ ರಾಜ್ಯಗಳ ಸ್ಪೀಕರ್ ಹಾಗೂ ಉಪ ಸ್ಪೀಕರ್ ಗಳು, ವಿಧಾನ ಪರಿಷತ್ ನ ಸಭಾಪತಿ, ಉಪ ಸಭಾಪತಿಗಳು, ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವ ಬಲಿಷ್ಠ ಗೊಳಿಸುವುದು, ಸ್ಪೀಕರ್ ಗಳ ಪಾತ್ರ ಸೇರಿದಂತೆ ಕೆಲವು ನಿರ್ದಿಷ್ಟ ವಿಷಯಗಳ ಮೇಲೆ ಸಮ್ಮೇಳನದಲ್ಲಿ ಚರ್ಚಿಸಲಾಗುತ್ತದೆ. ಸೆಪ್ಟೆಂಬರ್ 8 ರಂದು ಸಂಜೆ 6.30ಕ್ಕೆ ವಿಧಾನ ಸೌಧದಲ್ಲಿ ಲೋಕಸಭೆ ಸ್ಪೀಕರ್ ಉಪಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನಕ್ಕೆ ಚಾಲನೆ ನೀಡುವರು. ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು. ನಂತರದ ಕಾರ್ಯಕ್ರಮಗಳಲ್ಲಿ ಆಹ್ವಾನಿತರು ಮಾತ್ರ ಭಾಗವಹಿಸುತ್ತಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8ರಿಂದ 10ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.</p><p>ಶುಕ್ರವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಂದೆರಡು ಸ್ಥಳಗಳನ್ನು ಗುರುತಿಸಲಾಗಿದ್ದು, ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡಲಾಗುವುದು. ಸೆಪ್ಟೆಂಬರ್ 11ರಂದು, ಸಮ್ಮೇಳನದಲ್ಲಿ ಭಾಗವಹಿಸುವ ಸ್ಪೀಕರ್ ಗಳಿಗೆ ರಾಜ್ಯ ಪ್ರವಾಸಕ್ಕೆ ಕರೆದೊಯ್ಯಲು ಯೋಚಿಸಲಾಗಿದೆ. ಮೈಸೂರು, ಮಂಗಳೂರು ಹಾಗೂ ಬೇಲೂರು- ಹಳೆಬೀಡು ಈ ಮೂರು ಪ್ರವಾಸಿ ತಾಣಗಳಲ್ಲಿ ಯಾವುದಾದರೂ ಒಂದು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದರು.</p><p> ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಿದೆ. ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ ನೇತೃತದಲ್ಲಿ ಸಮ್ಮೇಳನ ನಡೆಯಲಿದೆ. ದೇಶದ ಎಲ್ಲ ರಾಜ್ಯಗಳ ಸ್ಪೀಕರ್ ಹಾಗೂ ಉಪ ಸ್ಪೀಕರ್ ಗಳು, ವಿಧಾನ ಪರಿಷತ್ ನ ಸಭಾಪತಿ, ಉಪ ಸಭಾಪತಿಗಳು, ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವ ಬಲಿಷ್ಠ ಗೊಳಿಸುವುದು, ಸ್ಪೀಕರ್ ಗಳ ಪಾತ್ರ ಸೇರಿದಂತೆ ಕೆಲವು ನಿರ್ದಿಷ್ಟ ವಿಷಯಗಳ ಮೇಲೆ ಸಮ್ಮೇಳನದಲ್ಲಿ ಚರ್ಚಿಸಲಾಗುತ್ತದೆ. ಸೆಪ್ಟೆಂಬರ್ 8 ರಂದು ಸಂಜೆ 6.30ಕ್ಕೆ ವಿಧಾನ ಸೌಧದಲ್ಲಿ ಲೋಕಸಭೆ ಸ್ಪೀಕರ್ ಉಪಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನಕ್ಕೆ ಚಾಲನೆ ನೀಡುವರು. ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು. ನಂತರದ ಕಾರ್ಯಕ್ರಮಗಳಲ್ಲಿ ಆಹ್ವಾನಿತರು ಮಾತ್ರ ಭಾಗವಹಿಸುತ್ತಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>