ಜನರಿಗೆ ಅಕ್ಕಿ, ಉಪ್ಪು ಸೇರಿದಂತೆ ಆಹಾರ ಧಾನ್ಯ ವಿತರಿಸುವುದನ್ನೂ ಅಪಾಯಕಾರಿ ಎಂದು ಕೋಮುವಾದಿ ಶಕ್ತಿಗಳು ಬಿಂಬಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಜನರಿಗೆ ಉಚಿತವಾಗಿ ಉಪ್ಪು ಹಂಚಿದರೆ ಅದಕ್ಕೆ ಪ್ರತಿಯಾಗಿ ಮತ ಕೇಳುತ್ತಾರೆ. ಅಭಿವೃದ್ಧಿ, ಬೆಲೆ ಏರಿಕೆ, ಶಿಕ್ಷಣ, ಆರೋಗ್ಯ ಸೇವೆಯಂತಹ ವಿಚಾರಗಳ ಕುರಿತು ಸಮಸ್ಯೆ ಎದುರಾಗಿದ್ದರೂ, ಕೋಮುವಾದದ ಹಿಡಿತಕ್ಕೆ ಸಿಲುಕಿರುವ ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮನಸ್ಥಿತಿ ಹೊಂದಿದ್ದಾರೆ ಎಂದು ಹೇಳಿದರು.