‘ಹಿಂದೂ ಸಾಮ್ರಾಟ್, ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆವು, ಜೈ ಶ್ರೀರಾಮ್’ ಎಂಬ ಬರಹ ಅದರಲ್ಲಿತ್ತು. ಇದು ವೈರಲ್ ಆಗಿತ್ತು.ಈ ಬಗ್ಗೆ ತಬೀಬ್ ಲ್ಯಾಂಡ್ನ ಮೊಹಮ್ಮದ್ ಅಜರ್ ಬೇಲೇರಿ ಶನಿವಾರ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿತ್ತು. ಗಲಭೆ ವಿಷಯ ತಿಳಿಯುತ್ತಿದ್ದಂತೆ, ಆರೋಪಿಯ ಕುಟುಂಬದವರು, ಯಾರ ಸಂಪರ್ಕಕ್ಕೂ ಸಿಗದಂತೆ ಆನಂದನಗರದಲ್ಲಿರುವ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ.