‘ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿದಂತೆ 26 ಉಪ ಪಂಗಡಗಳ ನೇತೃತ್ವದಲ್ಲಿ ಸೆ.9ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾನ ಮನಸ್ಕರ ಪೂರ್ವಭಾವಿ ಸಭೆ ಯಶಸ್ಸು ಕಂಡಿದೆ. ಇದರಿಂದ ವಿಚಲಿತರಾಗಿರುವ ಕೆಲವರು ಸಭೆಯ ನೇತೃತ್ವ ವಹಿಸಿದ್ದವರ ವಿರುದ್ಧ ಅಪಪ್ರಚಾರಕ್ಕೆ ಇಳಿದಿದ್ದಾರೆ. ಪ್ರಣವಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ ನೀಡಿರುವುದೂ ಇದರ ಭಾಗ’ ಎಂದು ಅವರು ಹೇಳಿದ್ದಾರೆ.