<p><strong>ಬೆಂಗಳೂರು: </strong>ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್ಹೋಲ್ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.</p>.<p>ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.</p>.<p>ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ ₹18.5 ಲಕ್ಷ ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸರ್ಕಾರ ತಕ್ಷಣವೇ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.</p>.<p>ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/ramanagara/three-workers-died-in-a-under-construction-manhole-at-ramanagar-835915.html" target="_blank">ನಿರ್ಮಾಣ ಹಂತದ ಮ್ಯಾನ್ ಹೋಲ್ಗೆ ಇಳಿದ ಮೂವರು ಕಾರ್ಮಿಕರ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್ಹೋಲ್ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.</p>.<p>ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.</p>.<p>ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ ₹18.5 ಲಕ್ಷ ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸರ್ಕಾರ ತಕ್ಷಣವೇ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.</p>.<p>ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/ramanagara/three-workers-died-in-a-under-construction-manhole-at-ramanagar-835915.html" target="_blank">ನಿರ್ಮಾಣ ಹಂತದ ಮ್ಯಾನ್ ಹೋಲ್ಗೆ ಇಳಿದ ಮೂವರು ಕಾರ್ಮಿಕರ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>