ನೆರವು ನೀಡುವ ಹೊಣೆಯನ್ನು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ನೀಡಲಾಗಿದೆ. ಒಂದು ಕುಟುಂಬದ ಒಬ್ಬರಿಗೆ ಮಾತ್ರ ನೆರವು ಸಿಗಲಿದೆ. ಮೃತ ವ್ಯಕ್ತಿಯ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳು ವಾರಸುದಾರರನ್ನು ಖಚಿತಪಡಿಸಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ನೀಡಬೇಕು. ನಿರ್ದೇಶಕರು 1 ಲಕ್ಷವನ್ನು ವಾರಸುದಾರರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.