<p><strong>ಕಲಬುರ್ಗಿ:</strong> ‘ನಗರದಲ್ಲಿ ಫೆ.5 ರಿಂದ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಮ್ಮನ್ನು ಕಡೆಗಣಿಸಲಾಗಿದೆ’ ಎಂದು ಪ್ರತಿಭಟನೆ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಜಿಲ್ಲಾಡಳಿತವು ಕಾಗುಣಿತ ಬರೆಯುವುದು ಸೇರಿ ಹಲವು ಸ್ಪರ್ಧೆಗಳನ್ನು ಆಯೋಜಿಸಿದೆ!</p>.<p>ಕನ್ನಡ ಸಾಹಿತ್ಯ ಕುರಿತ ರಸಪ್ರಶ್ನೆ, ಕಾಗುಣಿತ ಉಕ್ತಲೇಖನ (ಡಿಕ್ಟೇಷನ್), ಉಲ್ಲೇಖ ಬರೆಯುವುದು, ಪ್ರಬಂಧ, ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯನ್ನು ಸಮ್ಮೇಳನದ ಸ್ವಾಗತ ಸಮಿತಿ ಹಮ್ಮಿಕೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಲು ಸೂಚಿಸಲಾಗಿದೆ.</p>.<p>‘ಈ ಸ್ಪರ್ಧೆಗಳಲ್ಲಿ ಜಿಲ್ಲೆಯ ಎಲ್ಲಕನ್ನಡಪರ ಸಂಘಟನೆಗಳ ಸದಸ್ಯರು ಪಾಲ್ಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.</p>.<p>ಈ ಸ್ಪರ್ಧೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು,ಪದಾಧಿಕಾರಿಗಳು ಮಾತ್ರ ಭಾಗವಹಿಸಬೇಕು ಎಂದು ಸಮ್ಮೇಳನದ ಸಂಘಟಕರು ನಿಯಮ ರೂಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಜಿಲ್ಲಾ ಘಟಕದಅಧ್ಯಕ್ಷ ಮಂಜುನಾಥ ನಾಲವಾರಕರ್, ‘ಸ್ಪರ್ಧೆಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ನಮಗೆ ಹಿಂಜರಿಕೆ ಇಲ್ಲ. ಆದರೆ, ಒಂದು ಷರತ್ತು<br />ಹಾಕಿದ್ದೇವೆ. ಒಂದು ಕೊಠಡಿಯಲ್ಲಿ ಸ್ಪರ್ಧೆನಡೆಸುವುದು ಬೇಡ. ಸಮ್ಮೇಳನದ ಉದ್ಘಾಟನೆ ದಿನ ಫೆ 5ರಂದು ಮುಖ್ಯ ವೇದಿಕೆಯಲ್ಲೇ ಸ್ಪರ್ಧೆ ನಡೆಯಲಿ. ಅದರಲ್ಲಿ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳೂ ಭಾಗವಹಿಸಲಿ. ಅಲ್ಲಿ ನಮ್ಮ ವಿದ್ವತ್ತು ತೋರಿಸುತ್ತೇವೆ’ ಎಂದರು.</p>.<p>‘ಸಮ್ಮೇಳನಕ್ಕೆ ಕಸಾಪ ಹಿಂದಿನ ಅಧ್ಯಕ್ಷರು, ಕನ್ನಡಪರ ಸಂಘಟನೆಗಳ ಮುಖಂಡರನ್ನು ಏಕೆ ಆಹ್ವಾನಿಸಿಲ್ಲ ಎಂದು ಪ್ರಶ್ನಿಸಿದ್ದೇ ತಪ್ಪಾಗಿದೆ. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಅಚ್ಚು ಹಾಕಿಸಿದ್ದ ಆಹ್ವಾನ ಪತ್ರಿಕೆಯಲ್ಲಿ ಕಾಗುಣಿತ ದೋಷವಿದ್ದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ಸ್ಪರ್ಧೆಯಲ್ಲಿ ಸಿಂಪಿ ಅವರೂ ಭಾಗವಹಿಸಲಿ’ ಎಂದು ಸವಾಲು ಹಾಕಿದರು.</p>.<p><strong>***</strong></p>.<p>ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಿಗೆ ಕನ್ನಡ ಸಾಹಿತ್ಯ ಕುರಿತಾದ ಸ್ಪರ್ಧೆ ಆಯೋಜಿಸುವ ಮೂಲಕ ಅವರನ್ನೂ ತೊಡಗಿಸಿಕೊಂಡಿದ್ದೇವೆ</p>.<p><strong>- ಶರತ್ ಬಿ. ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ, ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ನಗರದಲ್ಲಿ ಫೆ.5 ರಿಂದ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಮ್ಮನ್ನು ಕಡೆಗಣಿಸಲಾಗಿದೆ’ ಎಂದು ಪ್ರತಿಭಟನೆ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಜಿಲ್ಲಾಡಳಿತವು ಕಾಗುಣಿತ ಬರೆಯುವುದು ಸೇರಿ ಹಲವು ಸ್ಪರ್ಧೆಗಳನ್ನು ಆಯೋಜಿಸಿದೆ!</p>.<p>ಕನ್ನಡ ಸಾಹಿತ್ಯ ಕುರಿತ ರಸಪ್ರಶ್ನೆ, ಕಾಗುಣಿತ ಉಕ್ತಲೇಖನ (ಡಿಕ್ಟೇಷನ್), ಉಲ್ಲೇಖ ಬರೆಯುವುದು, ಪ್ರಬಂಧ, ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯನ್ನು ಸಮ್ಮೇಳನದ ಸ್ವಾಗತ ಸಮಿತಿ ಹಮ್ಮಿಕೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಲು ಸೂಚಿಸಲಾಗಿದೆ.</p>.<p>‘ಈ ಸ್ಪರ್ಧೆಗಳಲ್ಲಿ ಜಿಲ್ಲೆಯ ಎಲ್ಲಕನ್ನಡಪರ ಸಂಘಟನೆಗಳ ಸದಸ್ಯರು ಪಾಲ್ಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.</p>.<p>ಈ ಸ್ಪರ್ಧೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು,ಪದಾಧಿಕಾರಿಗಳು ಮಾತ್ರ ಭಾಗವಹಿಸಬೇಕು ಎಂದು ಸಮ್ಮೇಳನದ ಸಂಘಟಕರು ನಿಯಮ ರೂಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಜಿಲ್ಲಾ ಘಟಕದಅಧ್ಯಕ್ಷ ಮಂಜುನಾಥ ನಾಲವಾರಕರ್, ‘ಸ್ಪರ್ಧೆಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ನಮಗೆ ಹಿಂಜರಿಕೆ ಇಲ್ಲ. ಆದರೆ, ಒಂದು ಷರತ್ತು<br />ಹಾಕಿದ್ದೇವೆ. ಒಂದು ಕೊಠಡಿಯಲ್ಲಿ ಸ್ಪರ್ಧೆನಡೆಸುವುದು ಬೇಡ. ಸಮ್ಮೇಳನದ ಉದ್ಘಾಟನೆ ದಿನ ಫೆ 5ರಂದು ಮುಖ್ಯ ವೇದಿಕೆಯಲ್ಲೇ ಸ್ಪರ್ಧೆ ನಡೆಯಲಿ. ಅದರಲ್ಲಿ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳೂ ಭಾಗವಹಿಸಲಿ. ಅಲ್ಲಿ ನಮ್ಮ ವಿದ್ವತ್ತು ತೋರಿಸುತ್ತೇವೆ’ ಎಂದರು.</p>.<p>‘ಸಮ್ಮೇಳನಕ್ಕೆ ಕಸಾಪ ಹಿಂದಿನ ಅಧ್ಯಕ್ಷರು, ಕನ್ನಡಪರ ಸಂಘಟನೆಗಳ ಮುಖಂಡರನ್ನು ಏಕೆ ಆಹ್ವಾನಿಸಿಲ್ಲ ಎಂದು ಪ್ರಶ್ನಿಸಿದ್ದೇ ತಪ್ಪಾಗಿದೆ. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಅಚ್ಚು ಹಾಕಿಸಿದ್ದ ಆಹ್ವಾನ ಪತ್ರಿಕೆಯಲ್ಲಿ ಕಾಗುಣಿತ ದೋಷವಿದ್ದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ಸ್ಪರ್ಧೆಯಲ್ಲಿ ಸಿಂಪಿ ಅವರೂ ಭಾಗವಹಿಸಲಿ’ ಎಂದು ಸವಾಲು ಹಾಕಿದರು.</p>.<p><strong>***</strong></p>.<p>ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಿಗೆ ಕನ್ನಡ ಸಾಹಿತ್ಯ ಕುರಿತಾದ ಸ್ಪರ್ಧೆ ಆಯೋಜಿಸುವ ಮೂಲಕ ಅವರನ್ನೂ ತೊಡಗಿಸಿಕೊಂಡಿದ್ದೇವೆ</p>.<p><strong>- ಶರತ್ ಬಿ. ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ, ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>