<p><strong>ಉಳ್ಳಾಲ</strong>: ‘ಶಾಸಕ ಯು.ಟಿ ಖಾದರ್ ಹೇಳಿಕೆಯಂತೆ ಮಂಗಳೂರು ಹೊತ್ತಿ ಉರಿದಿದ್ದು, ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ’ ಎಂದು ಮಂಗಳೂರು ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು.</p>.<p>ತೊಕ್ಕೊಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ತಪ್ಪು ಸಂದೇಶ ನೀಡಿದೆ. ಈ ನಡುವೆ ಶಾಸಕ ಯು.ಟಿ ಖಾದರ್ ಡಿ.17 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿ, ರಾಜ್ಯ ಹೊತ್ತಿ ಉರಿಯಲಿದೆ ಎಂದಿದ್ದರು. ಅದರಂತೆ ರಾಜ್ಯ ಮತ್ತು ಜಿಲ್ಲೆ ಹೊತ್ತಿ ಉರಿದಿದೆ’ ಎಂದು ದೂರಿದರು.</p>.<p>ಪೊಲೀಸರು ಕೂಡಲೇ ಪ್ರಥಮ ಮಾಹಿತಿ ವರದಿ ದಾಖಲಿಸಿ, ಶಾಸಕ ಯು.ಟಿ. ಖಾದರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಕ್ಷೇತ್ರ ನಿಯೋಜಿತ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಯಶವಂತ ಅಮೀನ್, ಮೋಹನದಾಸ್ ಶೆಟ್ಟಿ, ಹೇಮಂತ್ ಶೆಟ್ಟಿ, ಸಂಜೀವ ಶೆಟ್ಟಿ, ನಮಿತಾ ಶ್ಯಾಂ, ಮನೋಜ್ ಆಚಾರ್ಯ, ಜೀವನ್ ಕುಮಾರ್ ತೊಕ್ಕೊಟ್ಟು, ಮೋಹನ್ ರಾಜ್ ಕೆ.ಆರ್ ಇದ್ದರು.</p>.<p>ಪಾಂಡೇಶ್ವರ ಠಾಣೆಯಲ್ಲೂ ಪ್ರಕರಣ: ಪೌರತ್ವ ತಿದ್ದುಪಡಿ ಕಾಯ್ದೆ ಕರ್ನಾಟಕದಲ್ಲಿ ಅನುಷ್ಠಾನ ಮಾಡಿದಲ್ಲಿ ಕರ್ನಾಟಕ ಹೊತ್ತಿ ಉರಿಯುವುದಾಗಿ ಪ್ರಚೋದನೆ ನೀಡಿದ ಖಾದರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ, ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.</p>.<p>ವಕೀಲರ ಪ್ರಕೋಷ್ಠದ ಸುಧಾಕರ ಜೋಶಿ, ಬಲ್ಯ ಪುರಂದರ ಶೆಟ್ಟಿ, ಬಿ.ರವೀಂದ್ರ ಕುಮಾರ್, ಗಿರೀಶ್ ರೈ, ಮಹೇಶ್ ಜೋಗಿ, ಯುವ ಮೋರ್ಚಾದ ಪ್ರಮುಖರಾದ ಹರೀಶ್ ಮೂಡುಶೆಡ್ಡೆ, ಸುದರ್ಶನ ಬಜ, ಸುಜಿತ್ ಮಾಡೂರು, ಕಾರ್ತಿಕ್ ಬಳ್ಳಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ‘ಶಾಸಕ ಯು.ಟಿ ಖಾದರ್ ಹೇಳಿಕೆಯಂತೆ ಮಂಗಳೂರು ಹೊತ್ತಿ ಉರಿದಿದ್ದು, ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ’ ಎಂದು ಮಂಗಳೂರು ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು.</p>.<p>ತೊಕ್ಕೊಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ತಪ್ಪು ಸಂದೇಶ ನೀಡಿದೆ. ಈ ನಡುವೆ ಶಾಸಕ ಯು.ಟಿ ಖಾದರ್ ಡಿ.17 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿ, ರಾಜ್ಯ ಹೊತ್ತಿ ಉರಿಯಲಿದೆ ಎಂದಿದ್ದರು. ಅದರಂತೆ ರಾಜ್ಯ ಮತ್ತು ಜಿಲ್ಲೆ ಹೊತ್ತಿ ಉರಿದಿದೆ’ ಎಂದು ದೂರಿದರು.</p>.<p>ಪೊಲೀಸರು ಕೂಡಲೇ ಪ್ರಥಮ ಮಾಹಿತಿ ವರದಿ ದಾಖಲಿಸಿ, ಶಾಸಕ ಯು.ಟಿ. ಖಾದರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಕ್ಷೇತ್ರ ನಿಯೋಜಿತ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಯಶವಂತ ಅಮೀನ್, ಮೋಹನದಾಸ್ ಶೆಟ್ಟಿ, ಹೇಮಂತ್ ಶೆಟ್ಟಿ, ಸಂಜೀವ ಶೆಟ್ಟಿ, ನಮಿತಾ ಶ್ಯಾಂ, ಮನೋಜ್ ಆಚಾರ್ಯ, ಜೀವನ್ ಕುಮಾರ್ ತೊಕ್ಕೊಟ್ಟು, ಮೋಹನ್ ರಾಜ್ ಕೆ.ಆರ್ ಇದ್ದರು.</p>.<p>ಪಾಂಡೇಶ್ವರ ಠಾಣೆಯಲ್ಲೂ ಪ್ರಕರಣ: ಪೌರತ್ವ ತಿದ್ದುಪಡಿ ಕಾಯ್ದೆ ಕರ್ನಾಟಕದಲ್ಲಿ ಅನುಷ್ಠಾನ ಮಾಡಿದಲ್ಲಿ ಕರ್ನಾಟಕ ಹೊತ್ತಿ ಉರಿಯುವುದಾಗಿ ಪ್ರಚೋದನೆ ನೀಡಿದ ಖಾದರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ, ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.</p>.<p>ವಕೀಲರ ಪ್ರಕೋಷ್ಠದ ಸುಧಾಕರ ಜೋಶಿ, ಬಲ್ಯ ಪುರಂದರ ಶೆಟ್ಟಿ, ಬಿ.ರವೀಂದ್ರ ಕುಮಾರ್, ಗಿರೀಶ್ ರೈ, ಮಹೇಶ್ ಜೋಗಿ, ಯುವ ಮೋರ್ಚಾದ ಪ್ರಮುಖರಾದ ಹರೀಶ್ ಮೂಡುಶೆಡ್ಡೆ, ಸುದರ್ಶನ ಬಜ, ಸುಜಿತ್ ಮಾಡೂರು, ಕಾರ್ತಿಕ್ ಬಳ್ಳಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>