‘ಹುದ್ದೆಗಳಿಗೆ ಆಯ್ಕೆ ಮಾಡುವಾಗ ಉಳಿಕೆ ವೃಂದದ ಹುದ್ದೆಗಳನ್ನು ಮೊದಲು ಭರ್ತಿ ಮಾಡಿ, ಕಲ್ಯಾಣ ಕರ್ನಾಟಕ (ಹೈ–ಕ) ಪ್ರದೇಶಕ್ಕೆ ಮೀಸಲಿಟ್ಟ ಹುದ್ದೆಗಳನ್ನು ನಂತರ ತುಂಬಬೇಕು’ ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) 2023ರ ನ. 8ರಂದು ರದ್ದುಪಡಿಸಿದೆ. ಅಲ್ಲದೆ, ‘ಮೆರಿಟ್ ಇರುವ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳನ್ನು ಮೊದಲು ಕಲ್ಯಾಣ ಕರ್ನಾಟಕ ವೃಂದದಲ್ಲಿಯೇ ಭರ್ತಿ ಮಾಡಬೇಕು. ನಂತರ ಕಲ್ಯಾಣ ಕರ್ನಾಟಕ ವೃಂದದಲ್ಲಿ ಆಯ್ಕೆಯಾಗದ ಕಡಿಮೆ ಮೆರಿಟ್ ಇರುವ ಅಭ್ಯರ್ಥಿಗಳನ್ನು ಮಿಕ್ಕುಳಿದ ವೃಂದದಲ್ಲಿ ಅರ್ಹತೆಯ ಕ್ರಮದಲ್ಲಿ ಆಯ್ಕೆ ಮಾಡಬೇಕು’ ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೆಎಟಿಯ ಈ ಆದೇಶದ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸದೆ ಇಲಾಖಾ ಹಂತದಲ್ಲಿಯೇ ಕೆಎಟಿ ಆದೇಶ ಮತ್ತು ಅಭ್ಯರ್ಥಿಗಳಿಂದ ಬಂದಿರುವ ದೂರುಗಳನ್ನು ಪರಿಶೀಲಿಸಿ, 24 ಜಿಲ್ಲೆಗಳ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು’ ಎಂದು ಅವರು ಪಾಟೀಲ ಪ್ರತಿಪಾದಿಸಿದ್ದಾರೆ.