‘ಸಾಕ್ಷರತೆ ಕಾರ್ಯಕ್ರಮಗಳ ಯಶಸ್ಸಿಗೆ ಈ ವರ್ಷ ವಿಶೇಷ ಒತ್ತು ನೀಡಲಾಗುತ್ತಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಒಟ್ಟು 120 ತಾಸುಗಳ ಅವಧಿಗೆ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಅನಕ್ಷರಸ್ಥರು ಹೆಚ್ಚಿರುವ ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ‘ಪಢನಾ, ಲಿಖನಾ’ (ಓದು, ಬರಹ) ಅಭಿಯಾನಕ್ಕೆ ಆಯ್ಕೆ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.