ಜೈನಮುನಿ ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ನಗರದ ದಿಗಂಬರ ಜೈನ ಸಮಾಜದಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಮಾಜದ ಅಧ್ಯಕ್ಷ ರಾಜೇಂದ್ರ ಬೀಳಗಿ, ನಿಕಟಪೂರ್ವ ಅಧ್ಯಕ್ಷ ಶಾಂತಿನಾಥ ಹೋತಪೇಟಿ, ಉಪಾಧ್ಯಕ್ಷರಾದ ವಿಮಲ ತಾಳಿಕೋಳಿ, ಖಜಾಂಚಿ ಸಂತೋಷ ಮುರಗಿಪಾಟೀಲ, ಛಬ್ಬಿ ಸಮಾಜದ ಅಧ್ಯಕ್ಷ ದೇವೇಂದ್ರ ಇದ್ದರು.