ನಗರದ ಚನ್ನಸಂದ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಏರ್ಪಡಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಕುಟುಂಬದ ಸದಸ್ಯರು, ಒಡನಾಡಿಗಳು, ಸ್ನೇಹಿತರು ಹಾಗೂ ಸಂಬಂಧಿಗಳು ಪಾಲ್ಗೊಂಡಿದ್ದರು. ವೈದ್ಯರಾದ ಡಾ. ತಿಮ್ಮಪ್ಪ ಭಟ್, ಡಾ. ಸುದರ್ಶನ್ ಬಲ್ಲಾಳ್, ಡಾ. ಪಾಲ್ ಕ್ರಿಷ್ಟೊದಾಸ್, ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ್, ಕೆ.ಎಲ್.ಇ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಕೋರೆ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಸೇರಿದಂತೆ ಹಲವರು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.