<p><strong>ಮೈಸೂರು</strong>: ‘ಪಕ್ಷದಲ್ಲಿನ ಕೆಲ ಗೊಂದಲಗಳಿಂದ ಸರ್ಕಾರಕ್ಕೆ ಹಾನಿ ಆಗುತ್ತಿರುವುದು ಸತ್ಯ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್ ಸೇಠ್ ಹೇಳಿದರು.</p><p>ಬುಧವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅಧಿಕಾರ ಹಂಚಿಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ಮೊದಲಾದ ವಿಚಾರದಲ್ಲಿ ಗೊಂದಲಗಳು ಇರುವುದು ಸತ್ಯ. ಈ ಗೊಂದಲಗಳನ್ನು ಪಕ್ಷದ ಹೈಕಮಾಂಡ್ ಆದಷ್ಟು ಬೇಗ ನಿವಾರಿಸಬೇಕು’ ಎಂದರು.</p><p>‘ಈ ವಿಚಾರದಲ್ಲಿ ಸಚಿವ ಸತೀಶ ಜಾರಕಿಹೊಳಿ ನೇರವಾಗಿಯೇ ಹೇಳಿಕೆ ನೀಡಿದ್ದಾರೆ. ಅದಕ್ಕೆ ನನ್ನ ಸಮ್ಮತಿಯೂ ಇದೆ. ಕೆಪಿಸಿಸಿ ಅಧ್ಯಕ್ಷರನ್ನಾಗಿ ಯಾರನ್ನು ಮಾಡಬೇಕು ಎಂಬುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಇಂಥವರನ್ನು ನೇಮಸಿ, ಹೀಗೆಯೇ ಮಾಡಿ ಎಂದು ನಾನು ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.</p><p>‘ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡುವಾಗ ಶಾಸಕರ ಅಭಿಪ್ರಾಯವನ್ನೇನೂ ಕೇಳಿರಲಿಲ್ಲ ತಾನೇ? ಈಗಲೂ ಹಾಗೆಯೇ. ಹೈಕಮಾಂಡ್ ಒಬ್ಬರನ್ನು ತೀರ್ಮಾನಿಸಿರುತ್ತದೆ; ಅದನ್ನು ನಾವು ಒಪ್ಪಬೇಕಷ್ಟೆ. ಪಕ್ಷದಿಂದ ಸರ್ಕಾರವೇ ಹೊರತು ಸರ್ಕಾರದಿಂದ ಪಕ್ಷವಲ್ಲ’ ಎಂದರು.</p><p>‘ಚುನಾವಣೆ ವೇಳೆ ಪಕ್ಷವು ಜನರಿಗೆ ಹೇಳಿರುವ ಕೆಲಸವನ್ನ ನಾವು ಮಾಡಬೇಕು. ಈಗಿನಂತೆ ಗೊಂದಲಗಳಿದ್ದರೆ ಅದೆಲ್ಲ ಹೇಗಾಗುತ್ತದೆ ಹೇಳಿ?’ ಎಂದು ಕೇಳಿದರು.</p><p>‘ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಆ ಜವಾಬ್ದಾರಿ ನಿಭಾಯಿಸುವ ಶಕ್ತಿ ನನಗಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ಸಿದ್ದರಾಮಯ್ಯ ಇವಾಗಲೂ ಸಿಎಂ, ಮುಂದೆಯೂ ಸಿಎಂ: ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ.ಜಾತಿ ಗಣತಿ ವರದಿ ಜಾರಿಗೆ ವಿರೋಧ ಸಲ್ಲ; ಸತೀಶ್ ಜಾರಕಿಹೊಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪಕ್ಷದಲ್ಲಿನ ಕೆಲ ಗೊಂದಲಗಳಿಂದ ಸರ್ಕಾರಕ್ಕೆ ಹಾನಿ ಆಗುತ್ತಿರುವುದು ಸತ್ಯ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್ ಸೇಠ್ ಹೇಳಿದರು.</p><p>ಬುಧವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅಧಿಕಾರ ಹಂಚಿಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ಮೊದಲಾದ ವಿಚಾರದಲ್ಲಿ ಗೊಂದಲಗಳು ಇರುವುದು ಸತ್ಯ. ಈ ಗೊಂದಲಗಳನ್ನು ಪಕ್ಷದ ಹೈಕಮಾಂಡ್ ಆದಷ್ಟು ಬೇಗ ನಿವಾರಿಸಬೇಕು’ ಎಂದರು.</p><p>‘ಈ ವಿಚಾರದಲ್ಲಿ ಸಚಿವ ಸತೀಶ ಜಾರಕಿಹೊಳಿ ನೇರವಾಗಿಯೇ ಹೇಳಿಕೆ ನೀಡಿದ್ದಾರೆ. ಅದಕ್ಕೆ ನನ್ನ ಸಮ್ಮತಿಯೂ ಇದೆ. ಕೆಪಿಸಿಸಿ ಅಧ್ಯಕ್ಷರನ್ನಾಗಿ ಯಾರನ್ನು ಮಾಡಬೇಕು ಎಂಬುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಇಂಥವರನ್ನು ನೇಮಸಿ, ಹೀಗೆಯೇ ಮಾಡಿ ಎಂದು ನಾನು ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.</p><p>‘ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡುವಾಗ ಶಾಸಕರ ಅಭಿಪ್ರಾಯವನ್ನೇನೂ ಕೇಳಿರಲಿಲ್ಲ ತಾನೇ? ಈಗಲೂ ಹಾಗೆಯೇ. ಹೈಕಮಾಂಡ್ ಒಬ್ಬರನ್ನು ತೀರ್ಮಾನಿಸಿರುತ್ತದೆ; ಅದನ್ನು ನಾವು ಒಪ್ಪಬೇಕಷ್ಟೆ. ಪಕ್ಷದಿಂದ ಸರ್ಕಾರವೇ ಹೊರತು ಸರ್ಕಾರದಿಂದ ಪಕ್ಷವಲ್ಲ’ ಎಂದರು.</p><p>‘ಚುನಾವಣೆ ವೇಳೆ ಪಕ್ಷವು ಜನರಿಗೆ ಹೇಳಿರುವ ಕೆಲಸವನ್ನ ನಾವು ಮಾಡಬೇಕು. ಈಗಿನಂತೆ ಗೊಂದಲಗಳಿದ್ದರೆ ಅದೆಲ್ಲ ಹೇಗಾಗುತ್ತದೆ ಹೇಳಿ?’ ಎಂದು ಕೇಳಿದರು.</p><p>‘ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಆ ಜವಾಬ್ದಾರಿ ನಿಭಾಯಿಸುವ ಶಕ್ತಿ ನನಗಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.ಸಿದ್ದರಾಮಯ್ಯ ಇವಾಗಲೂ ಸಿಎಂ, ಮುಂದೆಯೂ ಸಿಎಂ: ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ.ಜಾತಿ ಗಣತಿ ವರದಿ ಜಾರಿಗೆ ವಿರೋಧ ಸಲ್ಲ; ಸತೀಶ್ ಜಾರಕಿಹೊಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>