<p><strong>ಬೆಂಗಳೂರು:</strong> ‘ಸಮ್ಮಿಶ್ರ ಸರ್ಕಾರದ ಮೊದಲ ದಿನದಿಂದಲೇ ಆರಂಭವಾದ ಅಸಮಾಧಾನ, ಕೋಪ–ತಾಪಗಳ ಅಭಿವ್ಯಕ್ತಿಯನ್ನು ತಡೆಯುವುದು ಅಸಾಧ್ಯವಾಗಿತ್ತೇ. ಈಗಲೂ ನಾವು ಪ್ರಾಮಾಣಿಕವಾಗಿ ಆತ್ಮಾವಲೋಕನ ಮಾಡಿಕೊಳ್ಳದಿದ್ದಲ್ಲಿ ಜನರ ನಂಬಿಕೆ ಹಾಗೂ ಬಯಕೆಗಳಿಗೆ ಸ್ಪಂದಿಸಲು ಸಾಧ್ಯವೇ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಚಂದ್ರಶೇಖರ್ ಪ್ರಶ್ನಿಸಿದ್ದಾರೆ.</p>.<p>‘ಲೋಕಸಭೆ ಚುನಾವಣೆಯಲ್ಲಿ ಭಾರಿ ಸೋಲಿನ ಬಳಿಕವಾದರೂ ತಾಳ್ಮೆ, ವಿವೇಚನೆ ಪ್ರದರ್ಶಿಸಬೇಕಿತ್ತು. ಅಭ್ಯರ್ಥಿ ಆಯ್ಕೆ ಹಾಗೂ ಪ್ರಚಾರದ ವಿಷಯದಲ್ಲಿ ಭಾಗಿಯಾಗದ ಸುಮಾರು 300 ಪದಾಧಿಕಾರಿಗಳಿದ್ದ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜನೆ<br />ಮಾಡುವ ಹಾಗೂ ನಮ್ಮ ಸೋಲಿಗೆ ಜೆಡಿಎಸ್ ಕಾರಣ ಎಂದು ಬಹಿರಂಗ ಹೇಳಿಕೆ ನೀಡುವ ಅನಿವಾರ್ಯ ಇತ್ತೇ’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p>‘ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ಪ್ರಮುಖವಾಗಿ ನಾಯಕರುಗಳು ಸೋಲಿನ ಹೊಣೆ ಹೊತ್ತ ನಂತರ ಇತರರ ಉತ್ತರದಾಯಿತ್ವಕ್ಕೆ ಒತ್ತಾಯಿಸುವುದೇ ಶಿಷ್ಟಾಚಾರ’ ಎಂದು ಹೇಳಿದ್ದಾರೆ.</p>.<p>‘ಸೋಲಿನ ವಿಚಾರವನ್ನು ಹಾದಿ ಬೀದಿಯಲ್ಲಿ ಮಾತನಾಡುವ ಬದಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆ ಕರೆಯಲು ಅಧ್ಯಕ್ಷರಿಗೆ ಪತ್ರ ಬರೆದಿದ್ದೆ. ಅವರಿಂದ ಈಗಲೂ ಪ್ರತಿಕ್ರಿಯೆ ಬಂದಿಲ್ಲ’ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಸಂಕೀರ್ಣ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶ ಸ್ವಾಗತಾರ್ಹ. ಕಾರ್ಯಕರ್ತರ ರಾಜಕೀಯ ಆಕಾಂಕ್ಷೆಗಳು, ಅವರ ಆತಂಕ–ನೋವುಗಳನ್ನು ಅರಿತಿರುವ ಖರ್ಗೆಯವರು ಸಮ್ಮಿಶ್ರ ಸರ್ಕಾರವನ್ನು ಮುಂದುವರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮ್ಮಿಶ್ರ ಸರ್ಕಾರದ ಮೊದಲ ದಿನದಿಂದಲೇ ಆರಂಭವಾದ ಅಸಮಾಧಾನ, ಕೋಪ–ತಾಪಗಳ ಅಭಿವ್ಯಕ್ತಿಯನ್ನು ತಡೆಯುವುದು ಅಸಾಧ್ಯವಾಗಿತ್ತೇ. ಈಗಲೂ ನಾವು ಪ್ರಾಮಾಣಿಕವಾಗಿ ಆತ್ಮಾವಲೋಕನ ಮಾಡಿಕೊಳ್ಳದಿದ್ದಲ್ಲಿ ಜನರ ನಂಬಿಕೆ ಹಾಗೂ ಬಯಕೆಗಳಿಗೆ ಸ್ಪಂದಿಸಲು ಸಾಧ್ಯವೇ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಚಂದ್ರಶೇಖರ್ ಪ್ರಶ್ನಿಸಿದ್ದಾರೆ.</p>.<p>‘ಲೋಕಸಭೆ ಚುನಾವಣೆಯಲ್ಲಿ ಭಾರಿ ಸೋಲಿನ ಬಳಿಕವಾದರೂ ತಾಳ್ಮೆ, ವಿವೇಚನೆ ಪ್ರದರ್ಶಿಸಬೇಕಿತ್ತು. ಅಭ್ಯರ್ಥಿ ಆಯ್ಕೆ ಹಾಗೂ ಪ್ರಚಾರದ ವಿಷಯದಲ್ಲಿ ಭಾಗಿಯಾಗದ ಸುಮಾರು 300 ಪದಾಧಿಕಾರಿಗಳಿದ್ದ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜನೆ<br />ಮಾಡುವ ಹಾಗೂ ನಮ್ಮ ಸೋಲಿಗೆ ಜೆಡಿಎಸ್ ಕಾರಣ ಎಂದು ಬಹಿರಂಗ ಹೇಳಿಕೆ ನೀಡುವ ಅನಿವಾರ್ಯ ಇತ್ತೇ’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p>‘ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ಪ್ರಮುಖವಾಗಿ ನಾಯಕರುಗಳು ಸೋಲಿನ ಹೊಣೆ ಹೊತ್ತ ನಂತರ ಇತರರ ಉತ್ತರದಾಯಿತ್ವಕ್ಕೆ ಒತ್ತಾಯಿಸುವುದೇ ಶಿಷ್ಟಾಚಾರ’ ಎಂದು ಹೇಳಿದ್ದಾರೆ.</p>.<p>‘ಸೋಲಿನ ವಿಚಾರವನ್ನು ಹಾದಿ ಬೀದಿಯಲ್ಲಿ ಮಾತನಾಡುವ ಬದಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆ ಕರೆಯಲು ಅಧ್ಯಕ್ಷರಿಗೆ ಪತ್ರ ಬರೆದಿದ್ದೆ. ಅವರಿಂದ ಈಗಲೂ ಪ್ರತಿಕ್ರಿಯೆ ಬಂದಿಲ್ಲ’ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಸಂಕೀರ್ಣ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶ ಸ್ವಾಗತಾರ್ಹ. ಕಾರ್ಯಕರ್ತರ ರಾಜಕೀಯ ಆಕಾಂಕ್ಷೆಗಳು, ಅವರ ಆತಂಕ–ನೋವುಗಳನ್ನು ಅರಿತಿರುವ ಖರ್ಗೆಯವರು ಸಮ್ಮಿಶ್ರ ಸರ್ಕಾರವನ್ನು ಮುಂದುವರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>