<p><strong>ಬೆಂಗಳೂರು</strong>: ನಿಗಮ–ಮಂಡಳಿಗಳಿಗೆ ಪಕ್ಷಕ್ಕಾಗಿ ದುಡಿದವರನ್ನು ಒಳಗೊಂಡ 650 ನಿರ್ದೇಶಕ ಸ್ಥಾನಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಪರಿಶ್ರಮವನ್ನು ಪಕ್ಷ ಗುರುತಿಸುತ್ತದೆ. ನಿಗಮ–ಮಂಡಳಿಗಳ ಅಧ್ಯಕ್ಷರೂ ಸೇರಿದಂತೆ ನೇಮಕವಾದ ಎಲ್ಲರಿಗೂ ಎರಡು ವರ್ಷಗಳ ಅವಧಿ ನೀಡಲಾಗುತ್ತಿದ್ದು, ನಂತರ ಇತರರಿಗೆ ಸ್ಥಾನ ನೀಡಲಾಗುವುದು ಎಂದರು.</p>.<p>ಪಕ್ಷಕ್ಕೆ ದುಡಿದ ಸುಮಾರು ಸಾವಿರ ಕಾರ್ಯಕರ್ತರಿಗೆ ಮುಂದಿನ ದಸರಾ ಕಾರ್ಯಕ್ರಮಕ್ಕೆ ಪಕ್ಷದಿಂದಲೇ ಆಹ್ವಾನ ನೀಡಲಾಗುವುದು. ಎಲ್ಲಾ ಭಾಗದವರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು ಎನ್ನುವುದು ಪಕ್ಷದ ಆಶಯ ಎಂದು ಹೇಳಿದರು. </p>.<p><strong>16 ಜಿಲ್ಲಾ ಘಟಕದ ಅಧ್ಯಕ್ಷರ ಬದಲಾವಣೆ </strong></p>.<p>ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಶತಮಾನ ಕಳೆದಿದ್ದು, ಈ ವರ್ಷವನ್ನು ಪಕ್ಷದ ಸಂಘಟನಾ ವರ್ಷವಾಗಿ ಆಚರಿಸಲಾಗುವುದು. 16 ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರನ್ನು ಬದಲಾವಣೆ ಮಾಡಲು ಸಿದ್ಧತೆ ನಡೆದಿದೆ. ಆಯ್ಕೆ ಪರಿಶೀಲನೆಗೆ ದೆಹಲಿಯಿಂದಲೇ ತಂಡ ಬರಲಿದೆ ಎಂದು ಮಾಹಿತಿ ನೀಡಿದರು.</p>.<p>ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಗಾಂಧಿ ಜ್ಯೋತಿ ಮೆರವಣಿಗೆ ನಡೆಸಲಾಗುವುದು. ನಿಗಮ–ಮಂಡಳಿ ಅಧ್ಯಕ್ಷರಿಗೆ ತಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ನೀಡಲಾಗುವುದು. ಕಾಂಗ್ರೆಸ್ ಸಂಸ್ಥಾಪನಾ ದಿನದ ವೇಳೆಗೆ ಗಾಂಧಿ ಜ್ಯೋತಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿಗಮ–ಮಂಡಳಿಗಳಿಗೆ ಪಕ್ಷಕ್ಕಾಗಿ ದುಡಿದವರನ್ನು ಒಳಗೊಂಡ 650 ನಿರ್ದೇಶಕ ಸ್ಥಾನಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಪರಿಶ್ರಮವನ್ನು ಪಕ್ಷ ಗುರುತಿಸುತ್ತದೆ. ನಿಗಮ–ಮಂಡಳಿಗಳ ಅಧ್ಯಕ್ಷರೂ ಸೇರಿದಂತೆ ನೇಮಕವಾದ ಎಲ್ಲರಿಗೂ ಎರಡು ವರ್ಷಗಳ ಅವಧಿ ನೀಡಲಾಗುತ್ತಿದ್ದು, ನಂತರ ಇತರರಿಗೆ ಸ್ಥಾನ ನೀಡಲಾಗುವುದು ಎಂದರು.</p>.<p>ಪಕ್ಷಕ್ಕೆ ದುಡಿದ ಸುಮಾರು ಸಾವಿರ ಕಾರ್ಯಕರ್ತರಿಗೆ ಮುಂದಿನ ದಸರಾ ಕಾರ್ಯಕ್ರಮಕ್ಕೆ ಪಕ್ಷದಿಂದಲೇ ಆಹ್ವಾನ ನೀಡಲಾಗುವುದು. ಎಲ್ಲಾ ಭಾಗದವರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು ಎನ್ನುವುದು ಪಕ್ಷದ ಆಶಯ ಎಂದು ಹೇಳಿದರು. </p>.<p><strong>16 ಜಿಲ್ಲಾ ಘಟಕದ ಅಧ್ಯಕ್ಷರ ಬದಲಾವಣೆ </strong></p>.<p>ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಶತಮಾನ ಕಳೆದಿದ್ದು, ಈ ವರ್ಷವನ್ನು ಪಕ್ಷದ ಸಂಘಟನಾ ವರ್ಷವಾಗಿ ಆಚರಿಸಲಾಗುವುದು. 16 ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರನ್ನು ಬದಲಾವಣೆ ಮಾಡಲು ಸಿದ್ಧತೆ ನಡೆದಿದೆ. ಆಯ್ಕೆ ಪರಿಶೀಲನೆಗೆ ದೆಹಲಿಯಿಂದಲೇ ತಂಡ ಬರಲಿದೆ ಎಂದು ಮಾಹಿತಿ ನೀಡಿದರು.</p>.<p>ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಗಾಂಧಿ ಜ್ಯೋತಿ ಮೆರವಣಿಗೆ ನಡೆಸಲಾಗುವುದು. ನಿಗಮ–ಮಂಡಳಿ ಅಧ್ಯಕ್ಷರಿಗೆ ತಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ನೀಡಲಾಗುವುದು. ಕಾಂಗ್ರೆಸ್ ಸಂಸ್ಥಾಪನಾ ದಿನದ ವೇಳೆಗೆ ಗಾಂಧಿ ಜ್ಯೋತಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>