ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ರೈತರ ಬಲವರ್ಧನೆಗೆ ಮತ್ತು ಆದಾಯ ಹೆಚ್ಚಿಸಲು ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ, ಕೃಷಿ ಕಾಯ್ದೆಗಳು ರೈತರ ಪರವಾಗಿದ್ದು, ಇದರಲ್ಲಿ ಯಾವುದೇ ಸಂಶಯಬೇಡ. ಈ ಬಗ್ಗೆ ಮನವರಿಕೆಯೂ ಮಾಡಿಕೊಡಲಾಗಿದೆ. ರೈತರು ಸರ್ಕಾರದ ಜೊತೆ ಸಹಕರಿಸಿ ಟ್ರ್ಯಾಕ್ಟರ್ ರ್ಯಾಲಿ ಪ್ರತಿಭಟನೆ ಕೈಬಿಡಬೇಕು’ ಎಂದು ಮನವಿ ಮಾಡಿದರು.