‘ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ’ ಎಂದು ಕಾಂಗ್ರೆಸ್ ಬರೆದುಕೊಂಡಿದೆ.
‘ಕ್ರಿಮಿನಲ್ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ. ಮೋದಿ ರೌಡಿ ಶೀಟರ್ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.