<p><strong>ಬೆಂಗಳೂರು:</strong> ಸಿದ್ದರಾಮಯ್ಯ ರಾಜೀನಾಮೆ ಅಂಗೀಕರವಾದ ಬೆನ್ನಲ್ಲೇ ನೂತನ ನಾಯಕನ ಆಯ್ಕೆಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. </p><p>ಇದೀಗ ಎಲ್ಲರ ಕಣ್ಣು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆಶಿ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. </p><p>ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಮೇಲ್ನೋಟದಲ್ಲಿ ಸಭೆ ನಡೆಯಲಿದೆ. </p><p>ಶುಕ್ರವಾರದಂದು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ. </p><p>ಮೂಲಗಳ ಪ್ರಕಾರ, ಹೊಸ ಸಿಎಲ್ಪಿ ನಾಯಕರಾಗಿ ಡಿಕೆಶಿ ಅವರ ಹೆಸರನ್ನು ಸಿದ್ದರಾಮಯ್ಯ ಸೂಚಿಸಲಿದ್ದಾರೆ. ಬಳಿಕ ಮುಂದಿನ ನಾಯಕನನ್ನು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕಾರ ಮಾಡಲಾಗುವುದು. </p><p>ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ಭಾನುವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆ ಇದೆ. </p>.ನನ್ನ ರಾಜಕೀಯ ಬದುಕಿಗೆ ಸಿದ್ದರಾಮಯ್ಯ ಮಾರ್ಗದರ್ಶನ: ಪ್ರಿಯಾಂಕ್ ಖರ್ಗೆ.ಹೈಕಮಾಂಡ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಸಚಿವಗಿರಿಗೆ ಲಾಬಿ ಜೋರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿದ್ದರಾಮಯ್ಯ ರಾಜೀನಾಮೆ ಅಂಗೀಕರವಾದ ಬೆನ್ನಲ್ಲೇ ನೂತನ ನಾಯಕನ ಆಯ್ಕೆಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. </p><p>ಇದೀಗ ಎಲ್ಲರ ಕಣ್ಣು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆಶಿ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. </p><p>ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಮೇಲ್ನೋಟದಲ್ಲಿ ಸಭೆ ನಡೆಯಲಿದೆ. </p><p>ಶುಕ್ರವಾರದಂದು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ. </p><p>ಮೂಲಗಳ ಪ್ರಕಾರ, ಹೊಸ ಸಿಎಲ್ಪಿ ನಾಯಕರಾಗಿ ಡಿಕೆಶಿ ಅವರ ಹೆಸರನ್ನು ಸಿದ್ದರಾಮಯ್ಯ ಸೂಚಿಸಲಿದ್ದಾರೆ. ಬಳಿಕ ಮುಂದಿನ ನಾಯಕನನ್ನು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕಾರ ಮಾಡಲಾಗುವುದು. </p><p>ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ಭಾನುವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆ ಇದೆ. </p>.ನನ್ನ ರಾಜಕೀಯ ಬದುಕಿಗೆ ಸಿದ್ದರಾಮಯ್ಯ ಮಾರ್ಗದರ್ಶನ: ಪ್ರಿಯಾಂಕ್ ಖರ್ಗೆ.ಹೈಕಮಾಂಡ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಸಚಿವಗಿರಿಗೆ ಲಾಬಿ ಜೋರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>