<p><strong>ಬೆಂಗಳೂರು:</strong> ಸುರಂಗ ರಸ್ತೆ ಯೋಜನೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ಕಮಿಷನ್ ಪಾಲು ಎಷ್ಟು' ಎಂದು ಪ್ರಶ್ನಿಸಿದ್ದಾರೆ. </p><p>ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಇಷ್ಟೆಲ್ಲ ಬಾಧಕಗಳಿರುವ ಸುರಂಗ ರಸ್ತೆಯನ್ನು ಮಾಡಿಯೇ ತೀರುತ್ತೇನೆ ಎನ್ನುವ ಹಠಕ್ಕೆ ಯಾಕೆ ಬಿದ್ದಿದ್ದೀರಿ' ಎಂದು ಡಿಕೆಶಿ ಅವರನ್ನು ಕೇಳಿದ್ದಾರೆ. </p><p>'ಐಐಎಸ್ಸಿ ಅಧ್ಯಯನ ವರದಿ, ವಿಜ್ಞಾನಿಗಳು, ಪರಿಸರ ತಜ್ಞರು, ಪರಿಸರವಾದಿಗಳು, ನಾಗರಿಕರು ಎಷ್ಟೇ ವಿರೋಧ ಮಾಡುತ್ತಿದ್ದರೂ ಸುರಂಗ ರಸ್ತೆ ಬಗ್ಗೆ ನಿಮಗೆ ಅಷ್ಟು ಅಚಲ ಆಸಕ್ತಿ ಯಾಕೆ? ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ?' ಎಂದು ಪ್ರಶ್ನಿಸಿದ್ದಾರೆ. </p><p>'ವೈಯಕ್ತಿಕ ಪ್ರತಿಷ್ಠೆ, ಹಠಕ್ಕಾಗಿ ಬೆಂಗಳೂರಿನ ಪರಿಸರಕ್ಕೆ ದೀರ್ಘಕಾಲೀನ ಅಪಾಯ ತಂದೊಡ್ಡುವ ಅವೈಜ್ಞಾನಿಕ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ರೀತಿ ಯೋಜನೆಯನ್ನು ಹೇರಿ ಬೆಂಗಳೂರಿನ ವಿಲನ್ ಆಗಬೇಡಿ' ಎಂದು ಹೇಳಿದ್ದಾರೆ. </p><p>'ಸುರಂಗ ರಸ್ತೆ ಯೋಜನೆಯಿಂದ ಜಲಮೂಲ, ಅಂತರ್ಜಲ, ಕೊಳವೆ ಬಾವಿಗೆ ಧಕ್ಕೆಯಾಗಲಿದೆ. ನಗರದ ಪರಿಸರಕ್ಕೆ ದೊಡ್ಡಮಟ್ಟದ ಹೊಡೆತ ಬೀಳಲಿದೆ. ಲಾಲ್ಬಾಗ್, ಕಬ್ಬನ್ ಪಾರ್ಕ್ನಂತಹ ನಗರದ ಶ್ವಾಸಕೋಶಗಳಿಗೆ ಹಾನಿಯಾಗಲಿದೆ. ಟ್ರಾಫಿಕ್ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಅಲ್ಲ' ಎಂದು ಅಶೋಕ ಅವರು ಉಲ್ಲೇಖಿಸಿದ್ದಾರೆ.</p>.ಸುರಂಗ ರಸ್ತೆ | ದೇವರಿಂದ ಮಾತ್ರ ನನ್ನನ್ನು ತಡೆಯಲು ಸಾಧ್ಯ: ಡಿ.ಕೆ. ಶಿವಕುಮಾರ್.ಸುರಂಗ ರಸ್ತೆ | ಕರ್ತವ್ಯ ನಿರ್ವಹಿಸುವೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುರಂಗ ರಸ್ತೆ ಯೋಜನೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ಕಮಿಷನ್ ಪಾಲು ಎಷ್ಟು' ಎಂದು ಪ್ರಶ್ನಿಸಿದ್ದಾರೆ. </p><p>ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಇಷ್ಟೆಲ್ಲ ಬಾಧಕಗಳಿರುವ ಸುರಂಗ ರಸ್ತೆಯನ್ನು ಮಾಡಿಯೇ ತೀರುತ್ತೇನೆ ಎನ್ನುವ ಹಠಕ್ಕೆ ಯಾಕೆ ಬಿದ್ದಿದ್ದೀರಿ' ಎಂದು ಡಿಕೆಶಿ ಅವರನ್ನು ಕೇಳಿದ್ದಾರೆ. </p><p>'ಐಐಎಸ್ಸಿ ಅಧ್ಯಯನ ವರದಿ, ವಿಜ್ಞಾನಿಗಳು, ಪರಿಸರ ತಜ್ಞರು, ಪರಿಸರವಾದಿಗಳು, ನಾಗರಿಕರು ಎಷ್ಟೇ ವಿರೋಧ ಮಾಡುತ್ತಿದ್ದರೂ ಸುರಂಗ ರಸ್ತೆ ಬಗ್ಗೆ ನಿಮಗೆ ಅಷ್ಟು ಅಚಲ ಆಸಕ್ತಿ ಯಾಕೆ? ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ?' ಎಂದು ಪ್ರಶ್ನಿಸಿದ್ದಾರೆ. </p><p>'ವೈಯಕ್ತಿಕ ಪ್ರತಿಷ್ಠೆ, ಹಠಕ್ಕಾಗಿ ಬೆಂಗಳೂರಿನ ಪರಿಸರಕ್ಕೆ ದೀರ್ಘಕಾಲೀನ ಅಪಾಯ ತಂದೊಡ್ಡುವ ಅವೈಜ್ಞಾನಿಕ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ರೀತಿ ಯೋಜನೆಯನ್ನು ಹೇರಿ ಬೆಂಗಳೂರಿನ ವಿಲನ್ ಆಗಬೇಡಿ' ಎಂದು ಹೇಳಿದ್ದಾರೆ. </p><p>'ಸುರಂಗ ರಸ್ತೆ ಯೋಜನೆಯಿಂದ ಜಲಮೂಲ, ಅಂತರ್ಜಲ, ಕೊಳವೆ ಬಾವಿಗೆ ಧಕ್ಕೆಯಾಗಲಿದೆ. ನಗರದ ಪರಿಸರಕ್ಕೆ ದೊಡ್ಡಮಟ್ಟದ ಹೊಡೆತ ಬೀಳಲಿದೆ. ಲಾಲ್ಬಾಗ್, ಕಬ್ಬನ್ ಪಾರ್ಕ್ನಂತಹ ನಗರದ ಶ್ವಾಸಕೋಶಗಳಿಗೆ ಹಾನಿಯಾಗಲಿದೆ. ಟ್ರಾಫಿಕ್ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಅಲ್ಲ' ಎಂದು ಅಶೋಕ ಅವರು ಉಲ್ಲೇಖಿಸಿದ್ದಾರೆ.</p>.ಸುರಂಗ ರಸ್ತೆ | ದೇವರಿಂದ ಮಾತ್ರ ನನ್ನನ್ನು ತಡೆಯಲು ಸಾಧ್ಯ: ಡಿ.ಕೆ. ಶಿವಕುಮಾರ್.ಸುರಂಗ ರಸ್ತೆ | ಕರ್ತವ್ಯ ನಿರ್ವಹಿಸುವೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>