ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಕ್ರಮ ದಂಧೆಕೋರರು ಹದ್ದು ಮೀರಿದ್ದರು, ಬಿಜೆಪಿಯ ರೌಡಿ ಮೋರ್ಚಾದಿಂದಾಗಿ ಕ್ರಿಮಿನಲ್ ಗಳು ಕಾನೂನಿನ ಭಯ ಕಳೆದುಕೊಂಡಿದ್ದರು. ಆದರೆ ನಮ್ಮ ಸರ್ಕಾರ ಬಿಜೆಪಿ ಅವಧಿಯಲ್ಲಿ ಹದ್ದು ಮೀರಿದ್ದವರನ್ನು ಕಠಿಣ ಕಾನೂನು ಕ್ರಮದ ಮೂಲಕ ತಹಬದಿಗೆ ತರಲಿದೆ ಎಂದಿದೆ.
ಬೆಳ್ತಂಗಡಿಯಲ್ಲಿ ಬಿಜೆಪಿ ಪದಾಧಿಕಾರಿಯ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಡೆದು ಕಾನೂನು ಕ್ರಮ ಜರುಗಿಸಿದ ಪೊಲೀಸರ ಮೇಲೆ ಬಿಜೆಪಿಯ ರೌಡಿ ಎಂಎಲ್ಎ ಹರೀಶ್ ಪೂಂಜಾ ದಬ್ಬಾಳಿಕೆ ನಡೆಸಿದ್ದಾರೆ. ಒಬ್ಬ ಶಾಸಕನ ಕೆಲಸ ಅಕ್ರಮಕೋರರನ್ನು ರಕ್ಷಿಸುವುದಾ ಅಥವಾ ಜನರ ಆಶೋತ್ತರಗಳನ್ನು ಈಡೇರಿಸುವುದಾ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ಕಾನೂನು ಸುವ್ಯವಸ್ಥೆಯ ಬಗ್ಗೆ ಪುಂಖಾನುಪುಂಖವಾಗಿ ಆರೋಪ ಮಾಡುವ ಬೊಮ್ಮಾಯಿ ಅವರೇ, ಆರ್, ಅಶೋಕ್ ಅವರೇ, ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ದೌರ್ಜನ್ಯ ಎಸಗುವ ನಿಮ್ಮ ಶಾಸಕನ ಕಾನೂನು ವಿರೋಧಿ ನಡೆಯ ಬಗ್ಗೆ ನಿಮ್ಮ ಸಹಮತವಿದೆಯೇ? ನಿಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಅಕ್ರಮಗಳನ್ನು ಪಾಲನೆ, ಪೋಷಣೆ ಮಾಡಿದ್ದರ ಪರಿಣಾಮ ಅಕ್ರಮಗಳು ಮಿತಿ ಮೀರಿದ್ದವಲ್ಲವೇ? ಕ್ರಿಮಿನಲ್ ಗಳಿಗೆ, ಅತ್ಯಾಚಾರಿಗಳಿಗೆ, ಕೊಲೆಗಡುಕರಿಗೆ ಬೆಂಬಲಿಸುವ ಬಿಜೆಪಿಗೆ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನೆ ಮಾಡುವ ನೈತಿಕತೆ ಇಲ್ಲ ಎಂದು ಹೇಳಿದೆ.