ಆ ಬಳಿಕ ಹೈದರಾಬಾದ್ ಸಮೀಪ ಬೃಹತ್ ಸಾರ್ವಜನಿಕ ರ್ಯಾಲಿ ನಡೆಸಲಾಗುತ್ತದೆ. ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗುತ್ತದೆ. ಜತೆಗೆ, ತೆಲಂಗಾಣ ಸರ್ಕಾರದ ವಿರುದ್ಧ ಆರೋಪಪಟ್ಟಿಯನ್ನೂ ಬಿಡುಗಡೆ ಮಾಡಲಾಗುತ್ತದೆ.