<p>ಬೆಂಗಳೂರು: ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>‘ಕರ್ನಾಟಕದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯ ಉಂಟುಮಾಡಿತ್ತು. ಅಲ್ಲದೆ, ಹಲವು ಅನುಮಾನಗಳನ್ನೂ ಹುಟ್ಟುಹಾಕಿತ್ತು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.</p>.<p>‘ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘ಮತಗಳ್ಳತನ’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ’ ಎಂದಿರುವ ಅವರು, ‘ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯ್ಕಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದೂ ಹೇಳಿದ್ದಾರೆ.</p>.<p>‘ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಅನುಮೋದಿಸುತ್ತೇನೆ. ರಾಜ್ಯದ ಹಲವು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆ ಮತ್ತು ಹಳೆಯ ಮತದಾರರ ಹೆಸರು ರದ್ದಾಗಿರುವುದರ ಬಗ್ಗೆ ಪಕ್ಷದ ಅನೇಕ ಕಾರ್ಯಕರ್ತರು ದೂರು ನೀಡಿದ್ದರು’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>‘ಕರ್ನಾಟಕದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯ ಉಂಟುಮಾಡಿತ್ತು. ಅಲ್ಲದೆ, ಹಲವು ಅನುಮಾನಗಳನ್ನೂ ಹುಟ್ಟುಹಾಕಿತ್ತು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.</p>.<p>‘ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘ಮತಗಳ್ಳತನ’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ’ ಎಂದಿರುವ ಅವರು, ‘ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯ್ಕಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದೂ ಹೇಳಿದ್ದಾರೆ.</p>.<p>‘ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಅನುಮೋದಿಸುತ್ತೇನೆ. ರಾಜ್ಯದ ಹಲವು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆ ಮತ್ತು ಹಳೆಯ ಮತದಾರರ ಹೆಸರು ರದ್ದಾಗಿರುವುದರ ಬಗ್ಗೆ ಪಕ್ಷದ ಅನೇಕ ಕಾರ್ಯಕರ್ತರು ದೂರು ನೀಡಿದ್ದರು’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>