<p><strong>ಹುಬ್ಬಳ್ಳಿ</strong>: ‘ಎರಡು ವರ್ಷದಿಂದ ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ನಡೆದಿಲ್ಲ. ಏನನ್ನೂ ಸಾಧನೆ ಮಾಡದ ರಾಜ್ಯ ಸರ್ಕಾರವು ಹೊಸಪೇಟೆಯಲ್ಲಿ ಯಾಕೆ ಸಾಧನಾ ಸಮಾವೇಶ ಆಯೋಜಿಸುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಪ್ರಶ್ನಿಸಿದರು.</p>.<p>‘ರಾಜ್ಯ ಸರ್ಕಾರವು ಈಗಾಗಲೇ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಗುತ್ತಿಗೆದಾರರ ಬಿಲ್ ಬಾಕಿಯಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಸಿಗುತ್ತಿಲ್ಲವೆಂದು ಸ್ವತಃ ಕಾಂಗ್ರೆಸ್ ಶಾಸಕರೇ ಅಳಲು ತೋಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಎರಡು ವರ್ಷದಿಂದ ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ನಡೆದಿಲ್ಲ. ಏನನ್ನೂ ಸಾಧನೆ ಮಾಡದ ರಾಜ್ಯ ಸರ್ಕಾರವು ಹೊಸಪೇಟೆಯಲ್ಲಿ ಯಾಕೆ ಸಾಧನಾ ಸಮಾವೇಶ ಆಯೋಜಿಸುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಪ್ರಶ್ನಿಸಿದರು.</p>.<p>‘ರಾಜ್ಯ ಸರ್ಕಾರವು ಈಗಾಗಲೇ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಗುತ್ತಿಗೆದಾರರ ಬಿಲ್ ಬಾಕಿಯಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಸಿಗುತ್ತಿಲ್ಲವೆಂದು ಸ್ವತಃ ಕಾಂಗ್ರೆಸ್ ಶಾಸಕರೇ ಅಳಲು ತೋಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>