<p><strong>ಬೆಳಗಾವಿ:</strong> ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು 'ಡಿನ್ನರ್ ಪಾರ್ಟಿ' ಆಯೋಜನೆ ಮಾಡಿದರು. ಈ ಊಟದ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಭಾಗವಹಿಸಿದರು.</p><p>ಸಿ.ಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಕೆ.ಎನ್.ರಾಜಣ್ಣ, ಗಣೇಶ ಹುಕ್ಕೇರಿ, ಬಿ.ಆರ್.ಪಾಟೀಲ, ಆಸಿಫ್ ಸೇಠ್, ವಿಶ್ವಾಸ ವೈದ್ಯ, ಮಹಾಂತೇಶ ಕೌಜಲಗಿ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ 20ಕ್ಕೂ ಹೆಚ್ಚು ಶಾಸಕರು ಈ ಪಾರ್ಟಿಯಲ್ಲಿ ಭಾಗಿಯಾದರು ಎಂದು ಮೂಲಗಳು ಖಚಿತಪಡಿಸಿವೆ.</p><p>ಈಚೆಗಷ್ಟೇ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರಿಗೆ ಮಾತ್ರ 'ಡಿನ್ನರ್ ಪಾರ್ಟಿ' ನೀಡಿದ್ದ ಸತೀಶ ಈಗ ಮತ್ತೊಮ್ಮೆ ಸಿದ್ದರಾಮಯ್ಯ ಆಪ್ತರನ್ನು ಒಂದೆಡೆ ಸೇರಿಸಿದ್ದಾರೆ.</p><p>ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದ ಒಂದಿಲ್ಲೊಂದು ಕಡೆ 'ಡಿನ್ನರ್ ಪಾರ್ಟಿ'ಗಳು ನಡೆಯುತ್ತಲೇ ಇರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು 'ಡಿನ್ನರ್ ಪಾರ್ಟಿ' ಆಯೋಜನೆ ಮಾಡಿದರು. ಈ ಊಟದ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಭಾಗವಹಿಸಿದರು.</p><p>ಸಿ.ಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಕೆ.ಎನ್.ರಾಜಣ್ಣ, ಗಣೇಶ ಹುಕ್ಕೇರಿ, ಬಿ.ಆರ್.ಪಾಟೀಲ, ಆಸಿಫ್ ಸೇಠ್, ವಿಶ್ವಾಸ ವೈದ್ಯ, ಮಹಾಂತೇಶ ಕೌಜಲಗಿ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ 20ಕ್ಕೂ ಹೆಚ್ಚು ಶಾಸಕರು ಈ ಪಾರ್ಟಿಯಲ್ಲಿ ಭಾಗಿಯಾದರು ಎಂದು ಮೂಲಗಳು ಖಚಿತಪಡಿಸಿವೆ.</p><p>ಈಚೆಗಷ್ಟೇ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರಿಗೆ ಮಾತ್ರ 'ಡಿನ್ನರ್ ಪಾರ್ಟಿ' ನೀಡಿದ್ದ ಸತೀಶ ಈಗ ಮತ್ತೊಮ್ಮೆ ಸಿದ್ದರಾಮಯ್ಯ ಆಪ್ತರನ್ನು ಒಂದೆಡೆ ಸೇರಿಸಿದ್ದಾರೆ.</p><p>ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದ ಒಂದಿಲ್ಲೊಂದು ಕಡೆ 'ಡಿನ್ನರ್ ಪಾರ್ಟಿ'ಗಳು ನಡೆಯುತ್ತಲೇ ಇರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>