<p><strong>ಕಲಬುರ್ಗಿ:</strong> ‘ನಾನು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಆರೋಪಿಸಿದ್ದರಿಂದಲೇ ಮಾನಸಿಕವಾಗಿ ನೊಂದ ನನ್ನ ಮಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಾಳೆ’ ಎಂದು ಮಾಜಿ ಶಾಸಕ ಡಾ.ಉಮೇಶ ಜಾಧವ ಆರೋಪಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಮುಖಂಡರು ನನ್ನ ವಿರುದ್ಧ ಆರೋಪ ಮಾಡುತ್ತಿರುವುದರಿಂದನನ್ನ ಕುಟುಂಬದ ಸದಸ್ಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ನನ್ನ ಮಗಳಿಗೆ ಸಾಕಷ್ಟು ಅವಮಾನ ಆಗಿದೆ. ಇದಕ್ಕೆಲ್ಲಾ ಕಾಂಗ್ರೆಸ್ ನಾಯಕರ ಆರೋಪವೇ ಕಾರಣ’ ಎಂದು ದೂರಿದರು.</p>.<p>‘ನಾನು ಹಣ ಪಡೆದಿದ್ದು ನಿಜವಾಗಿದ್ದರೆ ಯಾವುದೇ ಸಂಸ್ಥೆಯಿಂದ ಬೇಕಾದರೂ ತನಿಖೆ ನಡೆಸಲಿ’ ಎಂದು ಸವಾಲು ಹಾಕಿದರು.</p>.<p>ಅವರ ಪುತ್ರಿ ಶ್ರದ್ಧಾ ದ್ವಿತೀಯ ಪಿಯು ವಿಜ್ಞಾನ ಓದುತ್ತಿದ್ದರು.</p>.<p>‘ಮಲ್ಲಿಕಾರ್ಜುನ ಖರ್ಗೆ ನಮ್ಮ ದೇಶದ ಶ್ರೀಮಂತ ದಲಿತ ನಾಯಕ. ₹50 ಸಾವಿರ ಕೋಟಿ ಒಡೆಯ. ಅವರ ವಿರುದ್ಧಲೋಕಾಯುಕ್ತ ತನಿಖೆ ನಡೆಯುತ್ತಿದೆ. ಆದರೆ, ಈ ವಿಷಯವನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಡಲಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ನಾನು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಆರೋಪಿಸಿದ್ದರಿಂದಲೇ ಮಾನಸಿಕವಾಗಿ ನೊಂದ ನನ್ನ ಮಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಾಳೆ’ ಎಂದು ಮಾಜಿ ಶಾಸಕ ಡಾ.ಉಮೇಶ ಜಾಧವ ಆರೋಪಿಸಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಮುಖಂಡರು ನನ್ನ ವಿರುದ್ಧ ಆರೋಪ ಮಾಡುತ್ತಿರುವುದರಿಂದನನ್ನ ಕುಟುಂಬದ ಸದಸ್ಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ನನ್ನ ಮಗಳಿಗೆ ಸಾಕಷ್ಟು ಅವಮಾನ ಆಗಿದೆ. ಇದಕ್ಕೆಲ್ಲಾ ಕಾಂಗ್ರೆಸ್ ನಾಯಕರ ಆರೋಪವೇ ಕಾರಣ’ ಎಂದು ದೂರಿದರು.</p>.<p>‘ನಾನು ಹಣ ಪಡೆದಿದ್ದು ನಿಜವಾಗಿದ್ದರೆ ಯಾವುದೇ ಸಂಸ್ಥೆಯಿಂದ ಬೇಕಾದರೂ ತನಿಖೆ ನಡೆಸಲಿ’ ಎಂದು ಸವಾಲು ಹಾಕಿದರು.</p>.<p>ಅವರ ಪುತ್ರಿ ಶ್ರದ್ಧಾ ದ್ವಿತೀಯ ಪಿಯು ವಿಜ್ಞಾನ ಓದುತ್ತಿದ್ದರು.</p>.<p>‘ಮಲ್ಲಿಕಾರ್ಜುನ ಖರ್ಗೆ ನಮ್ಮ ದೇಶದ ಶ್ರೀಮಂತ ದಲಿತ ನಾಯಕ. ₹50 ಸಾವಿರ ಕೋಟಿ ಒಡೆಯ. ಅವರ ವಿರುದ್ಧಲೋಕಾಯುಕ್ತ ತನಿಖೆ ನಡೆಯುತ್ತಿದೆ. ಆದರೆ, ಈ ವಿಷಯವನ್ನು ಯಾರಿಗೂ ಗೊತ್ತಾಗದಂತೆ ಮುಚ್ಚಿಡಲಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>