<p><strong>ಬೆಂಗಳೂರು:</strong> 'ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಲೂಟಿಗಿಳಿದ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತದಿಂದ ಎರಡೂವರೆ ವರ್ಷ ಪೂರೈಸಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. </p><p>ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಕನ್ನಡಿಗರಿಗೆ ದಿನನಿತ್ಯದ ನರಕಯಾತನೆ. ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ, ಅಭಿವೃದ್ಧಿಗೆ ಇಲ್ಲ ಅನುದಾನ, ಫೇಲ್ ಸರ್ಕಾರ' ಎಂದು ಟೀಕಿಸಿದ್ದಾರೆ. </p><p>'ಬೆಲೆ ಏರಿಕೆ, ಭ್ರಷ್ಟಾಚಾರ, ಬೃಹತ್ ಸಾಲ ಇದೇ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಸಾಧನೆಯಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಗಾರ್ಬೆಜ್ ಸಿಟಿ, ಗುಂಡಿ ಸಿಟಿ, ಹಗಲು ದರೋಡೆ ಸಿಟಿ. ಇದು ಕಳೆದ 2.5 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಸೃಷ್ಟಿಸಿರುವ ಬ್ರ್ಯಾಂಡ್ ಬೆಂಗಳೂರು' ಎಂದು ಆರೋಪಿಸಿದ್ದಾರೆ. </p><p>ರಾಜ್ಯ ಕಂಡಂತಹ ಅತ್ಯಂತ ದುರ್ಬಲ, ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಈ ಸಂಬಂಧ ಪೋಸ್ಟರ್ ಹಾಗೂ ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ.</p>.ಜಾಗತಿಕ ಸಾಮರ್ಥ್ಯ ಕೇಂದ್ರ ಬೆಂಗಳೂರು ಈಗ ಜಾಗತಿಕ ಭ್ರಷ್ಟಾಚಾರ ಕೇಂದ್ರ: ವಿಜಯೇಂದ್ರ.ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಲೂಟಿಗಿಳಿದ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತದಿಂದ ಎರಡೂವರೆ ವರ್ಷ ಪೂರೈಸಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. </p><p>ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಕನ್ನಡಿಗರಿಗೆ ದಿನನಿತ್ಯದ ನರಕಯಾತನೆ. ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ, ಅಭಿವೃದ್ಧಿಗೆ ಇಲ್ಲ ಅನುದಾನ, ಫೇಲ್ ಸರ್ಕಾರ' ಎಂದು ಟೀಕಿಸಿದ್ದಾರೆ. </p><p>'ಬೆಲೆ ಏರಿಕೆ, ಭ್ರಷ್ಟಾಚಾರ, ಬೃಹತ್ ಸಾಲ ಇದೇ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಸಾಧನೆಯಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಗಾರ್ಬೆಜ್ ಸಿಟಿ, ಗುಂಡಿ ಸಿಟಿ, ಹಗಲು ದರೋಡೆ ಸಿಟಿ. ಇದು ಕಳೆದ 2.5 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಸೃಷ್ಟಿಸಿರುವ ಬ್ರ್ಯಾಂಡ್ ಬೆಂಗಳೂರು' ಎಂದು ಆರೋಪಿಸಿದ್ದಾರೆ. </p><p>ರಾಜ್ಯ ಕಂಡಂತಹ ಅತ್ಯಂತ ದುರ್ಬಲ, ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಈ ಸಂಬಂಧ ಪೋಸ್ಟರ್ ಹಾಗೂ ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ.</p>.ಜಾಗತಿಕ ಸಾಮರ್ಥ್ಯ ಕೇಂದ್ರ ಬೆಂಗಳೂರು ಈಗ ಜಾಗತಿಕ ಭ್ರಷ್ಟಾಚಾರ ಕೇಂದ್ರ: ವಿಜಯೇಂದ್ರ.ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>