<p><strong>ಕೋಲಾರ</strong>: ರಾಜ್ಯ ಕಾಂಗ್ರೆಸ್ ಸರ್ಕಾರ ಅಷ್ಟು ಸುಲಭವಾಗಿ ಬಿದ್ದು ಹೋಗುತ್ತದೆ ಎಂಬುದರ ಮೇಲೆ ನಾನೇನು ನಂಬಿಕೆ ಇಟ್ಟುಕೊಂಡಿಲ್ಲ, ಆ ಭ್ರಮೆಯಲ್ಲೂ ಇಲ್ಲ. ಏಕೆಂದರೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಇದ್ದರೂ ಸಿಕ್ಕಿರುವ ಅವಕಾಶದಲ್ಲೇ ಎಷ್ಟು ಬೇಕು ಅಷ್ಟು ದೋಚಬೇಕು ಎಂಬ ಭಾವನೆ ಅವರಲ್ಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.</p><p>ತಾಲ್ಲೂಕಿನ ಕಾಮದೇನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ, ‘ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ, ಕ್ರಾಂತಿ ಆಗುತ್ತದೆ ಎಂಬುದಾಗಿ ನಾನು ಎಲ್ಲೂ ಹೇಳಿಲ್ಲ. ಆ ಬಗ್ಗೆ ಹಗಲು ಕನಸು ಕೂಡ ಕಾಣುತ್ತಿಲ್ಲ. ಮುಂದೇನು ನಡೆಯುತ್ತದೆ ಎಂಬುದನ್ನು ಈಗಿನ ರಾಜಕಾರಣದಲ್ಲಿ ಅರ್ಥ ಮಾಡಿಕೊಳ್ಳುವುದು ಕಷ್ಟ. ಈಗಿನ ಪರಿಸ್ಥಿತಿ ಗಮನಿಸಿದರೆ ಏನು ಬೇಕಾದರೂ ಆಗಬಹುದು, ಈ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯಕರ್ತರು ಮೈಮರೆಯದೆ ಜನರ ಮಧ್ಯೆ ಕೆಲಸ ಮಾಡಿ ಎಂಬುದಾಗಿ ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದ್ದೇನೆ’ ಎಂದರು.</p><p>ಒಕ್ಕಲಿಗ ಶಾಸಕರು ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿ, ದೆಹಲಿಗೆ ಹೋಗಿ ಏನು ಸಾಧನೆ ಮಾಡಿದರು, ಈ ಬಗ್ಗೆ ಏನಾದರೂ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದರು.</p><p>ಒಕ್ಕಲಿಗರಿಗೆ ಮಾತ್ರವಲ್ಲ; ರಾಜ್ಯ ಪ್ರತಿ ಜನರಿಗೆ ಪ್ರಾಧಾನ್ಯ ದೊರಕಬೇಕು. ಏಳು ಕೋಟಿ ಜನರ ಬದುಕನ್ನು ಸರಿಪಡಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕು. ಒಂದು ಜಾತಿಗೆ ಸೀಮಿತವಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ರಾಜ್ಯ ಕಾಂಗ್ರೆಸ್ ಸರ್ಕಾರ ಅಷ್ಟು ಸುಲಭವಾಗಿ ಬಿದ್ದು ಹೋಗುತ್ತದೆ ಎಂಬುದರ ಮೇಲೆ ನಾನೇನು ನಂಬಿಕೆ ಇಟ್ಟುಕೊಂಡಿಲ್ಲ, ಆ ಭ್ರಮೆಯಲ್ಲೂ ಇಲ್ಲ. ಏಕೆಂದರೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಇದ್ದರೂ ಸಿಕ್ಕಿರುವ ಅವಕಾಶದಲ್ಲೇ ಎಷ್ಟು ಬೇಕು ಅಷ್ಟು ದೋಚಬೇಕು ಎಂಬ ಭಾವನೆ ಅವರಲ್ಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.</p><p>ತಾಲ್ಲೂಕಿನ ಕಾಮದೇನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ, ‘ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ, ಕ್ರಾಂತಿ ಆಗುತ್ತದೆ ಎಂಬುದಾಗಿ ನಾನು ಎಲ್ಲೂ ಹೇಳಿಲ್ಲ. ಆ ಬಗ್ಗೆ ಹಗಲು ಕನಸು ಕೂಡ ಕಾಣುತ್ತಿಲ್ಲ. ಮುಂದೇನು ನಡೆಯುತ್ತದೆ ಎಂಬುದನ್ನು ಈಗಿನ ರಾಜಕಾರಣದಲ್ಲಿ ಅರ್ಥ ಮಾಡಿಕೊಳ್ಳುವುದು ಕಷ್ಟ. ಈಗಿನ ಪರಿಸ್ಥಿತಿ ಗಮನಿಸಿದರೆ ಏನು ಬೇಕಾದರೂ ಆಗಬಹುದು, ಈ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯಕರ್ತರು ಮೈಮರೆಯದೆ ಜನರ ಮಧ್ಯೆ ಕೆಲಸ ಮಾಡಿ ಎಂಬುದಾಗಿ ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದ್ದೇನೆ’ ಎಂದರು.</p><p>ಒಕ್ಕಲಿಗ ಶಾಸಕರು ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿ, ದೆಹಲಿಗೆ ಹೋಗಿ ಏನು ಸಾಧನೆ ಮಾಡಿದರು, ಈ ಬಗ್ಗೆ ಏನಾದರೂ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದರು.</p><p>ಒಕ್ಕಲಿಗರಿಗೆ ಮಾತ್ರವಲ್ಲ; ರಾಜ್ಯ ಪ್ರತಿ ಜನರಿಗೆ ಪ್ರಾಧಾನ್ಯ ದೊರಕಬೇಕು. ಏಳು ಕೋಟಿ ಜನರ ಬದುಕನ್ನು ಸರಿಪಡಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕು. ಒಂದು ಜಾತಿಗೆ ಸೀಮಿತವಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>