<p><strong>ಬೆಂಗಳೂರು</strong>: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಬಳಕೆ ಆಗಬೇಕಾದ ಹಣವನ್ನು ಕಾಂಗ್ರೆಸ್ ನುಂಗಿಹಾಕಿದೆ. ಅದೇರೀತಿ ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಬಳಸಬೇಕಾದ ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ದೊಡ್ಡ ಪ್ರಮಾಣದಲ್ಲಿ ಎರಡು ಸಮುದಾಯಗಳಿಗೆ ಈ ಸರ್ಕಾರ ಅನ್ಯಾಯ ಮಾಡಿದೆ ಎಂದು ಸಭೆ ಅಭಿಪ್ರಾಯಪಟ್ಟಿದೆ ಎಂದು ವಿವರಿಸಿದರು.</p>.<p>ಬಿಜೆಪಿ ಸರ್ಕಾರ ಈ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸಿ ಅವರ ಕಲ್ಯಾಣಕ್ಕೆ ಮುಂದಾಗಿತ್ತು. ಆದರೆ, ಇವತ್ತಿನ ಕಾಂಗ್ರೆಸ್ ಸರ್ಕಾರವು ದಲಿತರ ಹೆಸರನ್ನು ಹೇಳುತ್ತ ದಲಿತರ ಹಣವನ್ನು ನುಂಗಲು ಭ್ರಷ್ಟಾಚಾರದಲ್ಲಿ ನಿರತವಾಗಿದೆ; ಇದರ ಪ್ರಯತ್ನದ ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ ಅವರು ಇದ್ದರೆ, ಸಚಿವ ಸಂಪುಟವು ದಲಿತರ ಹಣವನ್ನು ನುಂಗಿ ಹಾಕಲು ಸಹಮತ ವ್ಯಕ್ತಪಡಿಸಿದ್ದು ವಿಷಾದದ ಸಂಗತಿ ಎಂದು ನುಡಿದರು.</p>.<p>ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಎಸ್ಇಪಿ, ಟಿಎಸ್ಪಿ ಹಗರಣ, ಕಾರ್ಮಿಕ ಇಲಾಖೆಯ ಹಗರಣ- ಇದು ಹಗರಣಗಳ ಸರಮಾಲೆಯ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಬಳಕೆ ಆಗಬೇಕಾದ ಹಣವನ್ನು ಕಾಂಗ್ರೆಸ್ ನುಂಗಿಹಾಕಿದೆ. ಅದೇರೀತಿ ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಬಳಸಬೇಕಾದ ಎಸ್ಇಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ದೊಡ್ಡ ಪ್ರಮಾಣದಲ್ಲಿ ಎರಡು ಸಮುದಾಯಗಳಿಗೆ ಈ ಸರ್ಕಾರ ಅನ್ಯಾಯ ಮಾಡಿದೆ ಎಂದು ಸಭೆ ಅಭಿಪ್ರಾಯಪಟ್ಟಿದೆ ಎಂದು ವಿವರಿಸಿದರು.</p>.<p>ಬಿಜೆಪಿ ಸರ್ಕಾರ ಈ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸಿ ಅವರ ಕಲ್ಯಾಣಕ್ಕೆ ಮುಂದಾಗಿತ್ತು. ಆದರೆ, ಇವತ್ತಿನ ಕಾಂಗ್ರೆಸ್ ಸರ್ಕಾರವು ದಲಿತರ ಹೆಸರನ್ನು ಹೇಳುತ್ತ ದಲಿತರ ಹಣವನ್ನು ನುಂಗಲು ಭ್ರಷ್ಟಾಚಾರದಲ್ಲಿ ನಿರತವಾಗಿದೆ; ಇದರ ಪ್ರಯತ್ನದ ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ ಅವರು ಇದ್ದರೆ, ಸಚಿವ ಸಂಪುಟವು ದಲಿತರ ಹಣವನ್ನು ನುಂಗಿ ಹಾಕಲು ಸಹಮತ ವ್ಯಕ್ತಪಡಿಸಿದ್ದು ವಿಷಾದದ ಸಂಗತಿ ಎಂದು ನುಡಿದರು.</p>.<p>ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಎಸ್ಇಪಿ, ಟಿಎಸ್ಪಿ ಹಗರಣ, ಕಾರ್ಮಿಕ ಇಲಾಖೆಯ ಹಗರಣ- ಇದು ಹಗರಣಗಳ ಸರಮಾಲೆಯ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>