ಈ ಕುರಿತು ‘ಎಕ್ಸ್’ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತವರಿಗೆ ಸರ್ಕಾರ ಕೋಟ್ಯಂತರ ಹಣ ನೀಡಿದೆ. ಆದರೆ, ಬೀದಿ ಬೀದಿ ತಿರುಗಿ ಸಮೀಕ್ಷೆ ಮಾಡುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಿಡಿಗಾಸು ನೀಡುತ್ತಿದೆ. ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ನಿಯೋಜಿತರಾಗಿರುವ ಅವರಿಂದ ಗ್ಯಾರಂಟಿ ಸಮೀಕ್ಷೆ ನಡೆಸುತ್ತಿದೆ. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕಾದ ಸಂಸ್ಥೆಗಳಿಗೆ ಕೊಟ್ಟಿರುವ ಕೋಟ್ಯಂತರ ರೂಪಾಯಿ ತೆರಿಗೆ ಹಣ ಎಲ್ಲಿಗೆ ಹೋಯಿತು’ ಎಂದು ಪ್ರಶ್ನಿಸಿದ್ದಾರೆ.