<p><strong>ನವದೆಹಲಿ:</strong> ದಾವಣಗೆರೆ ಉಪಚುನಾವಣೆ ಬಳಿಕ ಕಾಂಗ್ರೆಸ್ನ ಮುಸ್ಲಿಂ ನಾಯಕರ ವಿರುದ್ಧ ಆತುರದಲ್ಲಿ ತೆಗೆದುಕೊಂಡ ಕ್ರಮ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಾವಣಗೆರೆ ಚುನಾವಣೆ ನಂತರ ನಡೆಯುತ್ತಿರುವ ಘಟನೆಗಳು ಒಳ್ಳೆಯ ಬೆಳವಣಿಗೆ ಅಲ್ಲ. ಸಚಿವ ಜಮೀರ್ ಅಹಮದ್ ಖಾನ್ ಪಕ್ಷದ ಹಿರಿಯ ನಾಯಕ. ಸಚಿವ ಸಂಪುಟದ ಹಿರಿಯ ಸದಸ್ಯರು. ಅವರ ರಾಜೀನಾಮೆ ವದಂತಿ ಸುದ್ದಿ ಹಿಂದೆ ಪಟ್ಟಭದ್ರರ ಹಿತಾಸಕ್ತಿ ಇದೆ. ಈ ವದಂತಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಪರಿಶೀಲನೆಗೆ ಶಿಸ್ತು ಸಮಿತಿ ಇದೆ. ಮೊದಲು ಶಿಸ್ತು ಸಮಿತಿಗೆ ದೂರು ಸಲ್ಲಿಸಬೇಕು. ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಅಧಿಕಾರ ಇದೆ. ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಈ ಬೆಳವಣಿಗೆ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿರಬಹುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಾವಣಗೆರೆ ಉಪಚುನಾವಣೆ ಬಳಿಕ ಕಾಂಗ್ರೆಸ್ನ ಮುಸ್ಲಿಂ ನಾಯಕರ ವಿರುದ್ಧ ಆತುರದಲ್ಲಿ ತೆಗೆದುಕೊಂಡ ಕ್ರಮ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಾವಣಗೆರೆ ಚುನಾವಣೆ ನಂತರ ನಡೆಯುತ್ತಿರುವ ಘಟನೆಗಳು ಒಳ್ಳೆಯ ಬೆಳವಣಿಗೆ ಅಲ್ಲ. ಸಚಿವ ಜಮೀರ್ ಅಹಮದ್ ಖಾನ್ ಪಕ್ಷದ ಹಿರಿಯ ನಾಯಕ. ಸಚಿವ ಸಂಪುಟದ ಹಿರಿಯ ಸದಸ್ಯರು. ಅವರ ರಾಜೀನಾಮೆ ವದಂತಿ ಸುದ್ದಿ ಹಿಂದೆ ಪಟ್ಟಭದ್ರರ ಹಿತಾಸಕ್ತಿ ಇದೆ. ಈ ವದಂತಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಪರಿಶೀಲನೆಗೆ ಶಿಸ್ತು ಸಮಿತಿ ಇದೆ. ಮೊದಲು ಶಿಸ್ತು ಸಮಿತಿಗೆ ದೂರು ಸಲ್ಲಿಸಬೇಕು. ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಅಧಿಕಾರ ಇದೆ. ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಈ ಬೆಳವಣಿಗೆ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿರಬಹುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>