‘ರಾಜ್ಯದ ಲೋಕಸಭೆ ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯ ಸಹಿತ ವರಿಷ್ಠರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಮತ್ತು ಶಿವಕುಮಾರ್, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ. ನಿಗಮ, ಮಂಡಳಿಗೆ ನೇಮಕದ ಪಟ್ಟಿ ಈಗಾಗಲೇ ವರಿಷ್ಠರಿಗೆ ತಲುಪಿದೆ. ಆದರೆ, ಪಟ್ಟಿಯ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನ ಒಪ್ಪಿಕೊಳ್ಳಲು ಕೂಡಾ ನಿರಾಕರಿಸುತ್ತಿದ್ದಾರೆ . ಈ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಪಕ್ಷದ ಪದಾಧಿಕಾರಿಗಳ ಬದಲಾವಣೆ ಬಗ್ಗೆಯೂ ವಿಚಾರವಿನಿಮಯ ನಡೆಯಲಿದೆ’ ಎಂದೂ ಮೂಲಗಳು ಹೇಳಿವೆ.