ಗೋಕಾಕ (ಬೆಳಗಾವಿ ಜಿಲ್ಲೆ): ಸಚಿವ ಸಂಪುಟದಿಂದ ಕೈಬಿಟ್ಟಿರುವುದರಿಂದ ಸಹಜವಾಗಿ ರಮೇಶ ಜಾರಕಿಹೊಳಿ ಅವರಿಗೆ ನೋವಾಗಿದೆ. ಅವರ ಮನವೊಲಿಸುವ ಕೆಲಸವನ್ನು ಸಚಿವ ಸತೀಶ ಜಾರಕಿಹೊಳಿ ಅವರೊಬ್ಬರ ಮೇಲೆ ಹಾಕದೇ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಧ್ಯಪ್ರವೇಶಿಸಿ ಸಮಾಧಾನಪಡಿಸಬೇಕೆಂದು ಸಹೋದರ ಲಖನ್ ಜಾರಕಿಹೊಳಿ ಆಗ್ರಹಿಸಿದರು.