ಮಾತು ಕೊಟ್ಟ ಮೇಲೆ ಮಾಡುತ್ತೇವೆ: ಸಿ.ಎಂ
ಹಾಸನ: ನಾಯಕತ್ವಕ್ಕಾಗಿ ‘ಅಂತರ್ಯುದ್ಧ’ ನಡೆಸುತ್ತಲೇ ‘ಉಪಾಹಾರ ಸಭೆ’ಗಳ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಶನಿವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಗಳು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿವೆ. ‘ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡಿಯೇ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು. ಹೇಮಾವತಿ ಜಲಾಶಯದ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ’ ಎಂದರು. ‘ಹೇಮಾವತಿ ಜಲಾಶಯದ ಬಳಿ ಉದ್ಯಾನ, ಪ್ರವಾ ಸೋದ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.