ಹಿರೇಕೆರೂರು ಪಟ್ಟಣದ ಹೊರವಲಯದ ಹೆಲಿಪ್ಯಾಡ್ ಬಳಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರದ ಮೇಲೆ ಕಾಂಗ್ರೆಸ್ನಿಂದ ಭ್ರಷ್ಟಾಚಾರ ಪ್ರಕರಣ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಇದು ಅತ್ಯಂತ ಹಾಸ್ಯಾಸ್ಪದ ಮತ್ತು ಕೀಳುಮಟ್ಟದ್ದು. ಕಾಂಗ್ರೆಸ್ನವರು ಕೇವಲ ರಾಜಕೀಯ ಕಾರಣಕ್ಕೆ ಮಾತಾಡ್ತಾ ಇದಾರೆ. ಸೋಲೋದು ಗ್ಯಾರಂಟಿ ಅಂತ ಗೊತ್ತಾಗಿದೆ. ಹೀಗಾಗಿ ಸುಳ್ಳು ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.