<p><strong>ಬೆಂಗಳೂರು</strong>: ‘ಎಲ್ಲಿ ವಿದ್ಯೆ ಕಡಿಮೆ ಇರುತ್ತದೆಯೋ ಅಲ್ಲಿ ಅರಿವೂ ಕಡಿಮೆ ಇರುತ್ತದೆ. ಮುಸಲ್ಮಾನ ಬಂಧುಗಳನ್ನು ಕಾಂಗ್ರೆಸ್ ಹಾದಿತಪ್ಪಿಸುತ್ತಿದೆ. ಕಾಂಗ್ರೆಸ್ ಬಿತ್ತುವ ವಿಷಕ್ಕೆ ಮುಸಲ್ಮಾನರು ಬಲಿಯಾಗುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.</p>.<p>ಬಿಜೆಪಿ ರಾಜ್ಯ ಕಚೇರಿಯಲ್ಲಿ ಅಲ್ಪಸಂಖ್ಯಾತರ ಮೋರ್ಚಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸಲಾಗುತ್ತದೆ, ಅವರನ್ನು ಬದುಕಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ವಿಷ ಬಿತ್ತುತ್ತಿದೆ’ ಎಂದು ಆರೋಪಿಸಿದರು.</p>.<p>‘ತಾನು ಮುಸಲ್ಮಾನರ ಪರ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ಹಾಗಿದ್ದಲ್ಲಿ, ಮುಸ್ಲಿಮರನ್ನು ಏಕೆ ಮುಖ್ಯಮಂತ್ರಿ ಮಾಡಿಲ್ಲ, ಪಕ್ಷದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಮರಿಗೇಕೆ ನೀಡಿಲ್ಲ. ಎಲ್ಲೆಡೆ ಮುಸ್ಲಿಮರನ್ನು ಜೋಕರ್ಗಳಂತೆ ಮುಂದೆ ತಂದು ಕೂರಿಸುತ್ತದೆ ಅಷ್ಟೆ’ ಎಂದರು.</p>.<p>‘ಕೋವಿಡ್ ಸಮಯದಲ್ಲಿ ರಾಜ್ಯದ ಜನರ ರಕ್ಷಣೆಗೆ ಶ್ರಮಹಾಕಿ ದುಡಿದವರನ್ನು ಅಭಿನಂದಿಸುವ ಬದಲಿಗೆ, ರಾಜ್ಯ ಸರ್ಕಾರವು ಅಂತಹವರ ಮೇಲೆ ಅವ್ಯವಹಾರದ ಆರೋಪ ಹೊರಿಸುತ್ತಿದೆ. ಬಿಜೆಪಿ ನಾಯಕರನ್ನು ಸಿಲುಕಿಸಲು ಮುಯ್ಯಿಗೆ ಮುಯ್ಯಿ ಎಂಬಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಉಡುಪಿಯ ಶಿಕ್ಷಕನೊಬ್ಬನಿಗೆ ಪ್ರಶಸ್ತಿ ಘೋಷಿಸಿ, ಆತ ಹಿಜಾಬ್ ನಿರ್ಬಂಧಿಸಿದರು ಎಂದು ಪ್ರಶಸ್ತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಸರ್ಕಾರವೇ ಆ ಶಿಕ್ಷಕನನ್ನು ಉತ್ತಮ ಎಂದು ಗುರುತಿಸಿತ್ತು. ಎಸ್ಡಿಪಿಐ ದೂರು ನೀಡಿದ ತಕ್ಷಣ ಪ್ರಶಸ್ತಿ ಪಟ್ಟಿಯಿಂದ ಹೊರಗಿಟ್ಟಿದೆ. ಇದು ಸರ್ಕಾರದ ದ್ವಂದ್ವ ನೀತಿಯಲ್ಲವೇ? ಕಾಂಗ್ರೆಸ್, ಎಸ್ಡಿಪಿಐ ಅನ್ನು ಕೇಳಿಕೊಂಡು ಸರ್ಕಾರ ನಡೆಸುತ್ತಿದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಲ್ಲಿ ವಿದ್ಯೆ ಕಡಿಮೆ ಇರುತ್ತದೆಯೋ ಅಲ್ಲಿ ಅರಿವೂ ಕಡಿಮೆ ಇರುತ್ತದೆ. ಮುಸಲ್ಮಾನ ಬಂಧುಗಳನ್ನು ಕಾಂಗ್ರೆಸ್ ಹಾದಿತಪ್ಪಿಸುತ್ತಿದೆ. ಕಾಂಗ್ರೆಸ್ ಬಿತ್ತುವ ವಿಷಕ್ಕೆ ಮುಸಲ್ಮಾನರು ಬಲಿಯಾಗುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.</p>.<p>ಬಿಜೆಪಿ ರಾಜ್ಯ ಕಚೇರಿಯಲ್ಲಿ ಅಲ್ಪಸಂಖ್ಯಾತರ ಮೋರ್ಚಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸಲಾಗುತ್ತದೆ, ಅವರನ್ನು ಬದುಕಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ವಿಷ ಬಿತ್ತುತ್ತಿದೆ’ ಎಂದು ಆರೋಪಿಸಿದರು.</p>.<p>‘ತಾನು ಮುಸಲ್ಮಾನರ ಪರ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ಹಾಗಿದ್ದಲ್ಲಿ, ಮುಸ್ಲಿಮರನ್ನು ಏಕೆ ಮುಖ್ಯಮಂತ್ರಿ ಮಾಡಿಲ್ಲ, ಪಕ್ಷದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಮರಿಗೇಕೆ ನೀಡಿಲ್ಲ. ಎಲ್ಲೆಡೆ ಮುಸ್ಲಿಮರನ್ನು ಜೋಕರ್ಗಳಂತೆ ಮುಂದೆ ತಂದು ಕೂರಿಸುತ್ತದೆ ಅಷ್ಟೆ’ ಎಂದರು.</p>.<p>‘ಕೋವಿಡ್ ಸಮಯದಲ್ಲಿ ರಾಜ್ಯದ ಜನರ ರಕ್ಷಣೆಗೆ ಶ್ರಮಹಾಕಿ ದುಡಿದವರನ್ನು ಅಭಿನಂದಿಸುವ ಬದಲಿಗೆ, ರಾಜ್ಯ ಸರ್ಕಾರವು ಅಂತಹವರ ಮೇಲೆ ಅವ್ಯವಹಾರದ ಆರೋಪ ಹೊರಿಸುತ್ತಿದೆ. ಬಿಜೆಪಿ ನಾಯಕರನ್ನು ಸಿಲುಕಿಸಲು ಮುಯ್ಯಿಗೆ ಮುಯ್ಯಿ ಎಂಬಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಉಡುಪಿಯ ಶಿಕ್ಷಕನೊಬ್ಬನಿಗೆ ಪ್ರಶಸ್ತಿ ಘೋಷಿಸಿ, ಆತ ಹಿಜಾಬ್ ನಿರ್ಬಂಧಿಸಿದರು ಎಂದು ಪ್ರಶಸ್ತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಸರ್ಕಾರವೇ ಆ ಶಿಕ್ಷಕನನ್ನು ಉತ್ತಮ ಎಂದು ಗುರುತಿಸಿತ್ತು. ಎಸ್ಡಿಪಿಐ ದೂರು ನೀಡಿದ ತಕ್ಷಣ ಪ್ರಶಸ್ತಿ ಪಟ್ಟಿಯಿಂದ ಹೊರಗಿಟ್ಟಿದೆ. ಇದು ಸರ್ಕಾರದ ದ್ವಂದ್ವ ನೀತಿಯಲ್ಲವೇ? ಕಾಂಗ್ರೆಸ್, ಎಸ್ಡಿಪಿಐ ಅನ್ನು ಕೇಳಿಕೊಂಡು ಸರ್ಕಾರ ನಡೆಸುತ್ತಿದೆಯೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>