ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಇಂದಿನ ಸಂಕಷ್ಟದ ಸ್ಥಿತಿಯಲ್ಲಿ ದೇಶಕ್ಕೆ ದೇವೇಗೌಡ ಅವರಂತಹ ಅವಶ್ಯಕತೆ ಇದೆ. ನಾಲ್ಕನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಕಾಂಗ್ರೆಸ್ ಪಕ್ಷ ನಮ್ಮ ಜತೆ ಚರ್ಚೆ ನಡೆಸಿಲ್ಲ. ದೇವೇಗೌಡರಿಗೆ ಎಲ್ಲ ಪಕ್ಷಗಳೂ ಬೆಂಬಲಿಸುತ್ತವೆ' ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದರು.