‘ನಮಗೆ ದೇಶ ಮತ್ತು ಜನರ ಹಿತ ಮುಖ್ಯವೇ ಹೊರತು ಪಕ್ಷವಲ್ಲ. ಸರ್ಕಾರಿ ಶಾಲೆಗಳಿಗೆ ಹಣದ ಕೊರತೆ ಇಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದೆ. ಅದಕ್ಕೆ ಇಚ್ಛಾಶಕ್ತಿ ಬೇಕು.ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಉದ್ದೇಶ ಪೂರ್ವಕವಾಗಿಯೇ ನಿರ್ಲಕ್ಷಿಸಿ, ಖಾಸಗಿ ಶಾಲೆಗಳನ್ನು ಬೆಳೆಸಲಾಗುತ್ತಿದೆ. ಎಲ್ಲಾ ಪಕ್ಷಗಳಲ್ಲಿ ಇರುವ ನಾಯಕರು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಇವರು ಪೋಷಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಇದಕ್ಕೆ ವ್ಯಾಪಕ ಚಳವಳಿಯ ಅಗತ್ಯವಿದೆ’ ಎಂದು ತಿಳಿಸಿದರು.