ಮಧ್ಯ ಕರ್ನಾಟಕದ ಅದೃಷ್ಟದ ನೆಲ ಎನಿಸಿರುವ ದಾವಣಗೆರೆಯಲ್ಲಿ ಬುಧವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ಸವದ ಅಬ್ಬರ ಜೋರಾಗಿತ್ತು. ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸಾಕ್ಷಿಯಾದರು. ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.