ಸುದ್ದಿಗಾರರ ಜತೆ ಮಾತನಾಡಿದ ಅವರು, ಈಚಿನ ವರ್ಷಗಳಲ್ಲಿ ಕುಲಪತಿಗಳ ನೇಮಕದಲ್ಲಿ ಪಾರದರ್ಶಕತೆ ಕಾಣುತ್ತಿಲ್ಲ. ಹಣ ನೀಡಿ ಹುದ್ದೆ ಪಡೆಯಲಾಗುತ್ತಿದೆ. ಹೀಗೆ ನೇಮಕವಾದವರು ರಾಜಕೀಯ ಹಿಡಿತದಲ್ಲೇ ಕೆಲಸ ಮಾಡುತ್ತಿದ್ದಾರೆ. ಸಿಂಡಿಕೇಟ್ಗಳಲ್ಲೂ ಸರ್ಕಾರ ನಾಮನಿರ್ದೇಶನ ಆರಂಭಿಸಿದ ನಂತರ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಉನ್ನತ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದರು.