<p><strong>ಬೆಂಗಳೂರು:</strong> ನನ್ನನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾದ ಬಿಜೆಪಿಯ ನನ್ನ ಸ್ನೇಹಿತರಿಗೆ ಧನ್ಯವಾದಗಳು ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ <a href="https://www.prajavani.net/tags/dk-shivakumar" target="_blank">ಡಿ.ಕೆ ಶಿವಕುಮಾರ್ </a>ಅವರು ಟ್ವೀಟ್ ಮಾಡಿದ್ದಾರೆ.</p>.<p>ದೆಹಲಿಯ ತಮ್ಮ ಫ್ಲ್ಯಾಟ್ನಲ್ಲಿ ಪತ್ತೆಯಾದ ₹8.50 ಕೋಟಿಹಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದ ಡಿ.ಕೆ ಶಿವಕುಮಾರ್ಮಂಗಳವಾರ ರಾತ್ರಿ ಬಂಧನಕ್ಕೀಡಾದರು. ಇದಾದ ಕೆಲವೇ ಕ್ಷಣಗಳಲ್ಲಿ ಅವರ ಟ್ವಿಟರ್ ಖಾತೆಯಿಂದ ಸಂದೇಶಗಳು ಹೊರಬಿದ್ದವು.</p>.<p><strong>ಏನು ಹೇಳಿದ್ದಾರೆ ಡಿಕೆಶಿ...</strong></p>.<p>‘ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದಲ್ಲಿನ ನನ್ನ ವಿರುದ್ಧದ ಪ್ರಕರಣಗಳು ರಾಜಕೀಯ ಪ್ರೇರಿತವಾದವು. ಬಿಜೆಪಿ ದ್ವೇಷದ, ಪ್ರತಿಕಾರದ ರಾಜಕಾರಣಕ್ಕೆ ನಾನು ಬಲಿಪಶುವಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಇದರಿಂದ ನಿರಾಶರಾಗಬೇಕಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.</p>.<p>‘ದೇವರು ಮತ್ತು ದೇಶದ ನ್ಯಾಯಾಂಗದ ಮೇಲೆ ನಾನು ನಂಬಿಕೆ ಇಟ್ಟಿದ್ದೇನೆ. ಅದರ ಮೂಲಕ, ಈ ದ್ವೇಷದರಾಜಕಾರಣವನ್ನು ಸಮರ್ಥವಾಗಿ ಮೆಟ್ಟಿ ನಿಲ್ಲುತ್ತೇನೆ,’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಗುಜರಾತ್ನ ಶಾಸಕರನ್ನು ರಕ್ಷಣೆ ಮಾಡಿದ್ದರ ಫಲವಾಗಿ ನನ್ನ ಮೇಲೆ ರಾಜಕೀಯ ಪ್ರೇರಿತವಾಗಿ ಆದಾಯ ತೆರಿಗೆ ದಾಳಿ ನಡೆಯಿತು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಪಕ್ಷ ಸೂಚಿಸಿದ್ದನ್ನು ಮಾಡಿದ್ದೇನೆ. ಅದಕ್ಕಾಗಿಯೇ ನಾನು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದೇನೆ,’ ಎಂದೂ ಅವರು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನನ್ನನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾದ ಬಿಜೆಪಿಯ ನನ್ನ ಸ್ನೇಹಿತರಿಗೆ ಧನ್ಯವಾದಗಳು ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ <a href="https://www.prajavani.net/tags/dk-shivakumar" target="_blank">ಡಿ.ಕೆ ಶಿವಕುಮಾರ್ </a>ಅವರು ಟ್ವೀಟ್ ಮಾಡಿದ್ದಾರೆ.</p>.<p>ದೆಹಲಿಯ ತಮ್ಮ ಫ್ಲ್ಯಾಟ್ನಲ್ಲಿ ಪತ್ತೆಯಾದ ₹8.50 ಕೋಟಿಹಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದ ಡಿ.ಕೆ ಶಿವಕುಮಾರ್ಮಂಗಳವಾರ ರಾತ್ರಿ ಬಂಧನಕ್ಕೀಡಾದರು. ಇದಾದ ಕೆಲವೇ ಕ್ಷಣಗಳಲ್ಲಿ ಅವರ ಟ್ವಿಟರ್ ಖಾತೆಯಿಂದ ಸಂದೇಶಗಳು ಹೊರಬಿದ್ದವು.</p>.<p><strong>ಏನು ಹೇಳಿದ್ದಾರೆ ಡಿಕೆಶಿ...</strong></p>.<p>‘ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದಲ್ಲಿನ ನನ್ನ ವಿರುದ್ಧದ ಪ್ರಕರಣಗಳು ರಾಜಕೀಯ ಪ್ರೇರಿತವಾದವು. ಬಿಜೆಪಿ ದ್ವೇಷದ, ಪ್ರತಿಕಾರದ ರಾಜಕಾರಣಕ್ಕೆ ನಾನು ಬಲಿಪಶುವಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಇದರಿಂದ ನಿರಾಶರಾಗಬೇಕಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.</p>.<p>‘ದೇವರು ಮತ್ತು ದೇಶದ ನ್ಯಾಯಾಂಗದ ಮೇಲೆ ನಾನು ನಂಬಿಕೆ ಇಟ್ಟಿದ್ದೇನೆ. ಅದರ ಮೂಲಕ, ಈ ದ್ವೇಷದರಾಜಕಾರಣವನ್ನು ಸಮರ್ಥವಾಗಿ ಮೆಟ್ಟಿ ನಿಲ್ಲುತ್ತೇನೆ,’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಗುಜರಾತ್ನ ಶಾಸಕರನ್ನು ರಕ್ಷಣೆ ಮಾಡಿದ್ದರ ಫಲವಾಗಿ ನನ್ನ ಮೇಲೆ ರಾಜಕೀಯ ಪ್ರೇರಿತವಾಗಿ ಆದಾಯ ತೆರಿಗೆ ದಾಳಿ ನಡೆಯಿತು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಪಕ್ಷ ಸೂಚಿಸಿದ್ದನ್ನು ಮಾಡಿದ್ದೇನೆ. ಅದಕ್ಕಾಗಿಯೇ ನಾನು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದೇನೆ,’ ಎಂದೂ ಅವರು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>